Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...