Homeಚಳವಳಿತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

ತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

- Advertisement -
- Advertisement -

ನಮ್ಮ ದೇಶದಲ್ಲಿ ಯಾವ ಕಾಯಿಲೆಗೆ ಮದ್ದು ಸಿಕ್ಕರೂ ಜಾತಿ ಕಾಯಿಲೆಗೆ ಮಾತ್ರ ಮದ್ದ ಸಿಗಲಾರದು. ಜಾತಿಯ ಕಾರಣಕ್ಕೆ ಜೀವನದ ಪ್ರತಿ ಕ್ಷಣವು ಅವಮಾನಿತರಾಗುವ ದಲಿತರು ಇಂದು ತಮ್ಮ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ. ತಮಿಳುನಾಡಿನಲ್ಲಿ ಅನ್ಯಾಯವಾಗಿ ಮೃತಪಟ್ಟ 17 ಜನ ದಲಿತರ ಉದಾಹರಣೆ ಭಾರತಕ್ಕಂಟಿರುವ ಜಾತಿಜಾಢ್ಯವನ್ನು ಎತ್ತಿ ಎತ್ತಿ ತೋರಿಸುತ್ತಿದೆ.

ತಮಿಳುನಾಡಿನ ಮೆಟ್ಟುಪಳ್ಳಾಯಂನಲ್ಲಿ ಮೇಲ್ಜಾತಿಯ ಜನ ದಲಿತರು ತಮ್ಮ ಮನೆ ಪ್ರವೇಶಿಸಬಾರದೆಂಬ ಕಾರಣಕ್ಕೆ ನಿರ್ಮಿಸಿದ್ದ ಕಾಂಪೌಂಡ್ ಗೋಡೆ ಕುಸಿದು ಹದಿನೇಳು ಜನ ದಲಿತರು ದುರ್ಮರಣ ಹೊಂದಿದ್ದಾರೆ. ಇಲ್ಲಿನ ಕಣ್ಣಪ್ಪನ್ ನಗರದಲ್ಲಿ 300 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಬಡವರ ಮನೆಗಳು ಪ್ರತಿ ಮಳೆಗಲಾದಲ್ಲೂ  ಭೀಕರ ಸಮಸ್ಯೆಗಳನ್ನ ಎದುರಿಸುತ್ತಿವೆ.

ಇಂಥ ಸಂದರ್ಭದಲ್ಲಿ ಆ ಊರಿನ ಶಿವ ಸುಬ್ರಮಣ್ಯಂ ಎಂಬ ಟೆಕ್ಸ್ ಟೈಲ್ಸ್ ಅಂಗಡಿಯ ಮಾಲೀಕ ತನ್ನ ಮನೆಯ ಹಿಂದೆ ಇರುವ ದಲಿತರು ಮನೆಯ ಹತ್ತಿರ ಬರಬಾರದೆಂದು ತಡೆಗೋಡೆ ನಿರ್ಮಿಸಿದ್ದಾನೆ. ದಲಿತ ಕುಟುಂಬಗಳು ಎಂಟುವರ್ಷಗಳಿಂದಲೂ ಈ ಗೋಡೆಯ ಬಗ್ಗೆ ಭಯಭೀತರಾಗಿ ಬದುಕು ಸಾಗಿಸುತ್ತಿದ್ದಾರೆ. ಈ ಹಿಂದೆ 12 ಅಡಿ ಇದ್ದ ಗೋಡೆಯನ್ನು ದಲಿತ ಸಂಘಟನೆಗಳ ಸತತ ಪ್ರತಿಭಟನೆಯ ಹೊರತಾಗಿಯೂ ಆತ 20ಅಡಿಗೆ ಎತ್ತರಿಸಿದ್ದಾನೆ.

ಶಿವಸುಬ್ರಮಣ್ಯಂ ಮನೆಯ ಗೋಡೆಯೂ ಸಹ ಅಷ್ಟು ಎತ್ತರಕ್ಕೆ ಇಲ್ಲ ಆದರೆ ದಲಿತರ ಓಡಾಡುವ ಮನೆಯ ಹಿಂದೆ ಮಾತ್ರ ಅಷ್ಟು ದೊಡ್ಡ ಗೋಡೆ ಕಟ್ಟಿದ್ದಾನೆ. ಈ ಗೋಡೆಯನ್ನು ಅತ್ಯಂತ ಕಳಪೆಯಾಗಿ ಬರೀ ಮಣ್ಣು ಮತ್ತು ಕಲ್ಲಿನಿಂದ ನಿರ್ಮಸಿದ್ದು ಸೋಮವಾರ  ಬಂದ ಮಳೆಗೆ ಇಡೀ ಗೋಡೆ ದಲಿತರ ಮನೆಗಳ ಮೇಲೆ ಕುಸಿದುಬಿದ್ದಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಬೇರೆ ಕುಟುಂಬಗಳ 17 ಜನ ಸಾವನ್ನಪ್ಪಿದ್ದಾರೆ. ತಮ್ಮದಲ್ಲದ ತಪ್ಪಿಗೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಳ್ಳಲು ಬಹಿರಂತ ಅಸ್ಪೃಶ್ಯತೆಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಬೃಹತ್ ಪ್ರತಿಭಟನೆ ಮಾಡಿದ ದಲಿತ ಸಂಘಟನೆಗಳು ಇದನ್ನು ‘ಜಾತಿ ಗೋಡೆ’ ಎಂದು ಕರೆದಿದ್ದಾರೆ. ಈ ಮನುಷ್ಯರನ್ನು ಮನುಷ್ಯರಂತೆ ನೋಡದ ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿದ ಅತಿ ದೊಡ್ಡ ಕಾಯಿಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಕಾಲ ಸಿನೆಮಾದ ನಿರ್ದೇಶಕ ಪ.ರಂಜಿತ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸದ ಡಿ.ರವಿಕುಮಾರ್ ಕೇಂದ್ರದ ಸಾಮಾಜಿಕ ನ್ಯಾಯ ಮತ್ತ ಸಬಲೀಕರಣ ಸಚಿವರಿಗೆ ಪತ್ರ ಬರೆದು ಈ ಅಸ್ಪೃಶ್ಯತೆಯ ಕುರಿತು ಸಮಗ್ರ ತನಿಖೆಯಾಗಬೇಕು, ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ಯುವಜನಾಂಗದ ಆಕ್ರೋಶಕ್ಕೆ ಜಾತಿಗೋಡೆ ತುತ್ತಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪಳನಿಸ್ವಾಮಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಈ ಘಟನೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಘಟನೆಗೆ ಕಾರಣನಾದ ಆರೋಪಿ ಮಾತ್ರ ಕಾಣೆಯಾಗಿದ್ದು ಇನ್ನು ಬಂಧನವಾಗಿಲ್ಲ. ಅಲ್ಲದೇ ಪೊಲೀಸರು ಆರಂಭದಲ್ಲಿ ಕೇವಲ 304 ನಿರ್ಲಕ್ಷ್ಯದಿಂದ ಸಾವಿಗೆ ಕಾರಣ ಎಂಬ ಕೇಸು ಮಾತ್ರ ಹಾಕಿದ್ದಕ್ಕೆ ದಲಿತ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಈ ಗೋಡೆಯ ವಿರುದ್ಧ ದೂರು ನೀಡಿದ್ದರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿವೆ. ಆದರೆ ಪೊಲೀಸರು ಪ್ರತಿಭಟನಕಾರರ ಮೇಲೆಯ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಡಿಎಮ್‌ಕೆ ಪಕ್ಷದ ಸ್ಟಾಲಿನ್ ಮಾತನಾಡಿ, ಕೂಡಲೇ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡಬೇಕು. ದಲಿತ ಹೋರಾಟಗಾರರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...