Homeಚಳವಳಿತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

ತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

- Advertisement -
- Advertisement -

ನಮ್ಮ ದೇಶದಲ್ಲಿ ಯಾವ ಕಾಯಿಲೆಗೆ ಮದ್ದು ಸಿಕ್ಕರೂ ಜಾತಿ ಕಾಯಿಲೆಗೆ ಮಾತ್ರ ಮದ್ದ ಸಿಗಲಾರದು. ಜಾತಿಯ ಕಾರಣಕ್ಕೆ ಜೀವನದ ಪ್ರತಿ ಕ್ಷಣವು ಅವಮಾನಿತರಾಗುವ ದಲಿತರು ಇಂದು ತಮ್ಮ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ. ತಮಿಳುನಾಡಿನಲ್ಲಿ ಅನ್ಯಾಯವಾಗಿ ಮೃತಪಟ್ಟ 17 ಜನ ದಲಿತರ ಉದಾಹರಣೆ ಭಾರತಕ್ಕಂಟಿರುವ ಜಾತಿಜಾಢ್ಯವನ್ನು ಎತ್ತಿ ಎತ್ತಿ ತೋರಿಸುತ್ತಿದೆ.

ತಮಿಳುನಾಡಿನ ಮೆಟ್ಟುಪಳ್ಳಾಯಂನಲ್ಲಿ ಮೇಲ್ಜಾತಿಯ ಜನ ದಲಿತರು ತಮ್ಮ ಮನೆ ಪ್ರವೇಶಿಸಬಾರದೆಂಬ ಕಾರಣಕ್ಕೆ ನಿರ್ಮಿಸಿದ್ದ ಕಾಂಪೌಂಡ್ ಗೋಡೆ ಕುಸಿದು ಹದಿನೇಳು ಜನ ದಲಿತರು ದುರ್ಮರಣ ಹೊಂದಿದ್ದಾರೆ. ಇಲ್ಲಿನ ಕಣ್ಣಪ್ಪನ್ ನಗರದಲ್ಲಿ 300 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಬಡವರ ಮನೆಗಳು ಪ್ರತಿ ಮಳೆಗಲಾದಲ್ಲೂ  ಭೀಕರ ಸಮಸ್ಯೆಗಳನ್ನ ಎದುರಿಸುತ್ತಿವೆ.

ಇಂಥ ಸಂದರ್ಭದಲ್ಲಿ ಆ ಊರಿನ ಶಿವ ಸುಬ್ರಮಣ್ಯಂ ಎಂಬ ಟೆಕ್ಸ್ ಟೈಲ್ಸ್ ಅಂಗಡಿಯ ಮಾಲೀಕ ತನ್ನ ಮನೆಯ ಹಿಂದೆ ಇರುವ ದಲಿತರು ಮನೆಯ ಹತ್ತಿರ ಬರಬಾರದೆಂದು ತಡೆಗೋಡೆ ನಿರ್ಮಿಸಿದ್ದಾನೆ. ದಲಿತ ಕುಟುಂಬಗಳು ಎಂಟುವರ್ಷಗಳಿಂದಲೂ ಈ ಗೋಡೆಯ ಬಗ್ಗೆ ಭಯಭೀತರಾಗಿ ಬದುಕು ಸಾಗಿಸುತ್ತಿದ್ದಾರೆ. ಈ ಹಿಂದೆ 12 ಅಡಿ ಇದ್ದ ಗೋಡೆಯನ್ನು ದಲಿತ ಸಂಘಟನೆಗಳ ಸತತ ಪ್ರತಿಭಟನೆಯ ಹೊರತಾಗಿಯೂ ಆತ 20ಅಡಿಗೆ ಎತ್ತರಿಸಿದ್ದಾನೆ.

ಶಿವಸುಬ್ರಮಣ್ಯಂ ಮನೆಯ ಗೋಡೆಯೂ ಸಹ ಅಷ್ಟು ಎತ್ತರಕ್ಕೆ ಇಲ್ಲ ಆದರೆ ದಲಿತರ ಓಡಾಡುವ ಮನೆಯ ಹಿಂದೆ ಮಾತ್ರ ಅಷ್ಟು ದೊಡ್ಡ ಗೋಡೆ ಕಟ್ಟಿದ್ದಾನೆ. ಈ ಗೋಡೆಯನ್ನು ಅತ್ಯಂತ ಕಳಪೆಯಾಗಿ ಬರೀ ಮಣ್ಣು ಮತ್ತು ಕಲ್ಲಿನಿಂದ ನಿರ್ಮಸಿದ್ದು ಸೋಮವಾರ  ಬಂದ ಮಳೆಗೆ ಇಡೀ ಗೋಡೆ ದಲಿತರ ಮನೆಗಳ ಮೇಲೆ ಕುಸಿದುಬಿದ್ದಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಬೇರೆ ಕುಟುಂಬಗಳ 17 ಜನ ಸಾವನ್ನಪ್ಪಿದ್ದಾರೆ. ತಮ್ಮದಲ್ಲದ ತಪ್ಪಿಗೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಳ್ಳಲು ಬಹಿರಂತ ಅಸ್ಪೃಶ್ಯತೆಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಬೃಹತ್ ಪ್ರತಿಭಟನೆ ಮಾಡಿದ ದಲಿತ ಸಂಘಟನೆಗಳು ಇದನ್ನು ‘ಜಾತಿ ಗೋಡೆ’ ಎಂದು ಕರೆದಿದ್ದಾರೆ. ಈ ಮನುಷ್ಯರನ್ನು ಮನುಷ್ಯರಂತೆ ನೋಡದ ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿದ ಅತಿ ದೊಡ್ಡ ಕಾಯಿಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಕಾಲ ಸಿನೆಮಾದ ನಿರ್ದೇಶಕ ಪ.ರಂಜಿತ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸದ ಡಿ.ರವಿಕುಮಾರ್ ಕೇಂದ್ರದ ಸಾಮಾಜಿಕ ನ್ಯಾಯ ಮತ್ತ ಸಬಲೀಕರಣ ಸಚಿವರಿಗೆ ಪತ್ರ ಬರೆದು ಈ ಅಸ್ಪೃಶ್ಯತೆಯ ಕುರಿತು ಸಮಗ್ರ ತನಿಖೆಯಾಗಬೇಕು, ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ಯುವಜನಾಂಗದ ಆಕ್ರೋಶಕ್ಕೆ ಜಾತಿಗೋಡೆ ತುತ್ತಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪಳನಿಸ್ವಾಮಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಈ ಘಟನೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಘಟನೆಗೆ ಕಾರಣನಾದ ಆರೋಪಿ ಮಾತ್ರ ಕಾಣೆಯಾಗಿದ್ದು ಇನ್ನು ಬಂಧನವಾಗಿಲ್ಲ. ಅಲ್ಲದೇ ಪೊಲೀಸರು ಆರಂಭದಲ್ಲಿ ಕೇವಲ 304 ನಿರ್ಲಕ್ಷ್ಯದಿಂದ ಸಾವಿಗೆ ಕಾರಣ ಎಂಬ ಕೇಸು ಮಾತ್ರ ಹಾಕಿದ್ದಕ್ಕೆ ದಲಿತ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಈ ಗೋಡೆಯ ವಿರುದ್ಧ ದೂರು ನೀಡಿದ್ದರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿವೆ. ಆದರೆ ಪೊಲೀಸರು ಪ್ರತಿಭಟನಕಾರರ ಮೇಲೆಯ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಡಿಎಮ್‌ಕೆ ಪಕ್ಷದ ಸ್ಟಾಲಿನ್ ಮಾತನಾಡಿ, ಕೂಡಲೇ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡಬೇಕು. ದಲಿತ ಹೋರಾಟಗಾರರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...