Homeಚಳವಳಿತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

ತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

- Advertisement -
- Advertisement -

ನಮ್ಮ ದೇಶದಲ್ಲಿ ಯಾವ ಕಾಯಿಲೆಗೆ ಮದ್ದು ಸಿಕ್ಕರೂ ಜಾತಿ ಕಾಯಿಲೆಗೆ ಮಾತ್ರ ಮದ್ದ ಸಿಗಲಾರದು. ಜಾತಿಯ ಕಾರಣಕ್ಕೆ ಜೀವನದ ಪ್ರತಿ ಕ್ಷಣವು ಅವಮಾನಿತರಾಗುವ ದಲಿತರು ಇಂದು ತಮ್ಮ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ. ತಮಿಳುನಾಡಿನಲ್ಲಿ ಅನ್ಯಾಯವಾಗಿ ಮೃತಪಟ್ಟ 17 ಜನ ದಲಿತರ ಉದಾಹರಣೆ ಭಾರತಕ್ಕಂಟಿರುವ ಜಾತಿಜಾಢ್ಯವನ್ನು ಎತ್ತಿ ಎತ್ತಿ ತೋರಿಸುತ್ತಿದೆ.

ತಮಿಳುನಾಡಿನ ಮೆಟ್ಟುಪಳ್ಳಾಯಂನಲ್ಲಿ ಮೇಲ್ಜಾತಿಯ ಜನ ದಲಿತರು ತಮ್ಮ ಮನೆ ಪ್ರವೇಶಿಸಬಾರದೆಂಬ ಕಾರಣಕ್ಕೆ ನಿರ್ಮಿಸಿದ್ದ ಕಾಂಪೌಂಡ್ ಗೋಡೆ ಕುಸಿದು ಹದಿನೇಳು ಜನ ದಲಿತರು ದುರ್ಮರಣ ಹೊಂದಿದ್ದಾರೆ. ಇಲ್ಲಿನ ಕಣ್ಣಪ್ಪನ್ ನಗರದಲ್ಲಿ 300 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಬಡವರ ಮನೆಗಳು ಪ್ರತಿ ಮಳೆಗಲಾದಲ್ಲೂ  ಭೀಕರ ಸಮಸ್ಯೆಗಳನ್ನ ಎದುರಿಸುತ್ತಿವೆ.

ಇಂಥ ಸಂದರ್ಭದಲ್ಲಿ ಆ ಊರಿನ ಶಿವ ಸುಬ್ರಮಣ್ಯಂ ಎಂಬ ಟೆಕ್ಸ್ ಟೈಲ್ಸ್ ಅಂಗಡಿಯ ಮಾಲೀಕ ತನ್ನ ಮನೆಯ ಹಿಂದೆ ಇರುವ ದಲಿತರು ಮನೆಯ ಹತ್ತಿರ ಬರಬಾರದೆಂದು ತಡೆಗೋಡೆ ನಿರ್ಮಿಸಿದ್ದಾನೆ. ದಲಿತ ಕುಟುಂಬಗಳು ಎಂಟುವರ್ಷಗಳಿಂದಲೂ ಈ ಗೋಡೆಯ ಬಗ್ಗೆ ಭಯಭೀತರಾಗಿ ಬದುಕು ಸಾಗಿಸುತ್ತಿದ್ದಾರೆ. ಈ ಹಿಂದೆ 12 ಅಡಿ ಇದ್ದ ಗೋಡೆಯನ್ನು ದಲಿತ ಸಂಘಟನೆಗಳ ಸತತ ಪ್ರತಿಭಟನೆಯ ಹೊರತಾಗಿಯೂ ಆತ 20ಅಡಿಗೆ ಎತ್ತರಿಸಿದ್ದಾನೆ.

ಶಿವಸುಬ್ರಮಣ್ಯಂ ಮನೆಯ ಗೋಡೆಯೂ ಸಹ ಅಷ್ಟು ಎತ್ತರಕ್ಕೆ ಇಲ್ಲ ಆದರೆ ದಲಿತರ ಓಡಾಡುವ ಮನೆಯ ಹಿಂದೆ ಮಾತ್ರ ಅಷ್ಟು ದೊಡ್ಡ ಗೋಡೆ ಕಟ್ಟಿದ್ದಾನೆ. ಈ ಗೋಡೆಯನ್ನು ಅತ್ಯಂತ ಕಳಪೆಯಾಗಿ ಬರೀ ಮಣ್ಣು ಮತ್ತು ಕಲ್ಲಿನಿಂದ ನಿರ್ಮಸಿದ್ದು ಸೋಮವಾರ  ಬಂದ ಮಳೆಗೆ ಇಡೀ ಗೋಡೆ ದಲಿತರ ಮನೆಗಳ ಮೇಲೆ ಕುಸಿದುಬಿದ್ದಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಬೇರೆ ಕುಟುಂಬಗಳ 17 ಜನ ಸಾವನ್ನಪ್ಪಿದ್ದಾರೆ. ತಮ್ಮದಲ್ಲದ ತಪ್ಪಿಗೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಳ್ಳಲು ಬಹಿರಂತ ಅಸ್ಪೃಶ್ಯತೆಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಬೃಹತ್ ಪ್ರತಿಭಟನೆ ಮಾಡಿದ ದಲಿತ ಸಂಘಟನೆಗಳು ಇದನ್ನು ‘ಜಾತಿ ಗೋಡೆ’ ಎಂದು ಕರೆದಿದ್ದಾರೆ. ಈ ಮನುಷ್ಯರನ್ನು ಮನುಷ್ಯರಂತೆ ನೋಡದ ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿದ ಅತಿ ದೊಡ್ಡ ಕಾಯಿಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಕಾಲ ಸಿನೆಮಾದ ನಿರ್ದೇಶಕ ಪ.ರಂಜಿತ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸದ ಡಿ.ರವಿಕುಮಾರ್ ಕೇಂದ್ರದ ಸಾಮಾಜಿಕ ನ್ಯಾಯ ಮತ್ತ ಸಬಲೀಕರಣ ಸಚಿವರಿಗೆ ಪತ್ರ ಬರೆದು ಈ ಅಸ್ಪೃಶ್ಯತೆಯ ಕುರಿತು ಸಮಗ್ರ ತನಿಖೆಯಾಗಬೇಕು, ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ಯುವಜನಾಂಗದ ಆಕ್ರೋಶಕ್ಕೆ ಜಾತಿಗೋಡೆ ತುತ್ತಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪಳನಿಸ್ವಾಮಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಈ ಘಟನೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಘಟನೆಗೆ ಕಾರಣನಾದ ಆರೋಪಿ ಮಾತ್ರ ಕಾಣೆಯಾಗಿದ್ದು ಇನ್ನು ಬಂಧನವಾಗಿಲ್ಲ. ಅಲ್ಲದೇ ಪೊಲೀಸರು ಆರಂಭದಲ್ಲಿ ಕೇವಲ 304 ನಿರ್ಲಕ್ಷ್ಯದಿಂದ ಸಾವಿಗೆ ಕಾರಣ ಎಂಬ ಕೇಸು ಮಾತ್ರ ಹಾಕಿದ್ದಕ್ಕೆ ದಲಿತ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಈ ಗೋಡೆಯ ವಿರುದ್ಧ ದೂರು ನೀಡಿದ್ದರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿವೆ. ಆದರೆ ಪೊಲೀಸರು ಪ್ರತಿಭಟನಕಾರರ ಮೇಲೆಯ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಡಿಎಮ್‌ಕೆ ಪಕ್ಷದ ಸ್ಟಾಲಿನ್ ಮಾತನಾಡಿ, ಕೂಡಲೇ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡಬೇಕು. ದಲಿತ ಹೋರಾಟಗಾರರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...