Homeಮುಖಪುಟಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

- Advertisement -
- Advertisement -

ತೋಟಗಾರಿಕೆ ಸಚಿವ ಮುನಿರತ್ನರವರು 40% ಕಮಿಷನ್‍ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ಬಂಧನಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಸರ್ಕಾರ ನಡೆಸುತ್ತಿರುವ ಭಾರೀ ಭ್ರಷ್ಟಾಚಾರ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಸಮರ್ಪಕ ತನಿಖೆ ನಡೆಸುವುದು ಬಿಟ್ಟು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿರುವ 80 ವರ್ಷದ ಕೆಂಪಣ್ಣನವರನ್ನು ರಾತ್ರೋರಾತ್ರಿ ಬಂಧಿಸುವುದು ಎಷ್ಟು ಸರಿ? ಎಂದು ಹಲವರು ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಎಂತಹ  ನ್ಯಾಯ ವ್ಯವಸ್ಥೆಯಿದೆ? 40% ದಂಧೆಯನ್ನು ಬಯಲಿಗೆಳೆದ ವ್ಯಕ್ತಿಗೆ ಜೈಲು ಶಿಕ್ಷೆ. ಆದರೆ ಪಕ್ಷದ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಲ್ಲವೂ ಆಡಳಿತ ಪಕ್ಷದ ದುಷ್ಕೃತ್ಯಗಳನ್ನು ರಕ್ಷಿಸಲು ನಡೆಯುತ್ತಿದೆ ಎಂದು ಸಹನಾ ಎಂಬುವವರು ಕಿಡಿಕಾರಿದ್ದಾರೆ.

40% ಕಮಿಷನ್ ವಿಚಾರ ಬಹಿರಂಗಪಡೆಸಿದ ವ್ಯಕ್ತಿಯನ್ನು, 40% ಕಮಿಷನ್ ಪಡೆದ ಆರೋಪ ಹೊತ್ತ ವ್ಯಕ್ತಿಯಿಂದ ಬಂಧಿಸಲಾಗಿದೆ. ಕೆಂಪಣ್ಣನವರೆ, ಕಾನೂನಿನ ನ್ಯಾಯಾಲಯದಲ್ಲೂ, ಜನತಾ ನ್ಯಾಯಾಲಯದಲ್ಲೂ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಕೆಂಪಣ್ಣನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

40% ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ.‌ ಅದೂ ಮುನಿರತ್ನ ವಿರುದ್ಧ ಆರೋಪದ ಬಗ್ಗೆ. ‌ಹಾಗೆ ಮಾಡಿದರೆ ಎಲ್ಲಾ ಬಿಜೆಪಿ ನಾಯಕರನ್ನು ಬಂಧಿಸಬೇಕು, ಮುನಿರತ್ನ ಬಿಜೆಪಿ ಸೇರುವುದಕ್ಕೆ ಮುನ್ನ ‌ಭ್ರಷ್ಟರೇ ಆಗಿದ್ದರು, ನಂತರ ಪಾವನರಾದರು.‌ ಹೀಗೆ ಜನಸಾಮಾನ್ಯರನ್ನು ಹೆದರಿಸುವ ಕ್ರಮವನ್ನು ಕಂಡಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಅಕ್ಕಿ ಟ್ವೀಟ್ ಮಾಡಿದ್ದಾರೆ.

 

ರಾಜ್ಯದ ಎಲ್ಲಾ ಕಾಮಗಾರಿಗಳಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಂಪಣ್ಣವನರು ಆರೋಪ ಮಾಡಿದ್ದರು. ಆನಂತರ ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಆನಂತರ ಸಚಿವ ಮುನಿರತ್ನ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಾಗಾಗಿ ಸಚಿವ ಮುನಿರತ್ನ ಡಿ ಕೆಂಪಣ್ಣ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಯ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವಾರೆಂಟ್ ಜಾರಿ ಆಗಿದ್ದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರ ಸಹಿತ ಕೃಷ್ಣಾ ರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದಾರೆ

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಅರ್ಜಿಯಲ್ಲಿ “ಶ್ರೀ ಕೃಷ್ಣದೇವರಾಯ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದೆ. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ನಡೆಯುವುದು ಅನುಮಾನವಾಗಿದೆ. ಗುತ್ತಿಗೆದಾರರ ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಕೋರಿದ್ದರು.

ಇದನ್ನೂ ಓದಿ; 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...