Homeಮುಖಪುಟಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

- Advertisement -
- Advertisement -

ತೋಟಗಾರಿಕೆ ಸಚಿವ ಮುನಿರತ್ನರವರು 40% ಕಮಿಷನ್‍ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ಬಂಧನಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಸರ್ಕಾರ ನಡೆಸುತ್ತಿರುವ ಭಾರೀ ಭ್ರಷ್ಟಾಚಾರ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಸಮರ್ಪಕ ತನಿಖೆ ನಡೆಸುವುದು ಬಿಟ್ಟು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿರುವ 80 ವರ್ಷದ ಕೆಂಪಣ್ಣನವರನ್ನು ರಾತ್ರೋರಾತ್ರಿ ಬಂಧಿಸುವುದು ಎಷ್ಟು ಸರಿ? ಎಂದು ಹಲವರು ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಎಂತಹ  ನ್ಯಾಯ ವ್ಯವಸ್ಥೆಯಿದೆ? 40% ದಂಧೆಯನ್ನು ಬಯಲಿಗೆಳೆದ ವ್ಯಕ್ತಿಗೆ ಜೈಲು ಶಿಕ್ಷೆ. ಆದರೆ ಪಕ್ಷದ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಲ್ಲವೂ ಆಡಳಿತ ಪಕ್ಷದ ದುಷ್ಕೃತ್ಯಗಳನ್ನು ರಕ್ಷಿಸಲು ನಡೆಯುತ್ತಿದೆ ಎಂದು ಸಹನಾ ಎಂಬುವವರು ಕಿಡಿಕಾರಿದ್ದಾರೆ.

40% ಕಮಿಷನ್ ವಿಚಾರ ಬಹಿರಂಗಪಡೆಸಿದ ವ್ಯಕ್ತಿಯನ್ನು, 40% ಕಮಿಷನ್ ಪಡೆದ ಆರೋಪ ಹೊತ್ತ ವ್ಯಕ್ತಿಯಿಂದ ಬಂಧಿಸಲಾಗಿದೆ. ಕೆಂಪಣ್ಣನವರೆ, ಕಾನೂನಿನ ನ್ಯಾಯಾಲಯದಲ್ಲೂ, ಜನತಾ ನ್ಯಾಯಾಲಯದಲ್ಲೂ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಕೆಂಪಣ್ಣನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

40% ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ.‌ ಅದೂ ಮುನಿರತ್ನ ವಿರುದ್ಧ ಆರೋಪದ ಬಗ್ಗೆ. ‌ಹಾಗೆ ಮಾಡಿದರೆ ಎಲ್ಲಾ ಬಿಜೆಪಿ ನಾಯಕರನ್ನು ಬಂಧಿಸಬೇಕು, ಮುನಿರತ್ನ ಬಿಜೆಪಿ ಸೇರುವುದಕ್ಕೆ ಮುನ್ನ ‌ಭ್ರಷ್ಟರೇ ಆಗಿದ್ದರು, ನಂತರ ಪಾವನರಾದರು.‌ ಹೀಗೆ ಜನಸಾಮಾನ್ಯರನ್ನು ಹೆದರಿಸುವ ಕ್ರಮವನ್ನು ಕಂಡಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಅಕ್ಕಿ ಟ್ವೀಟ್ ಮಾಡಿದ್ದಾರೆ.

 

ರಾಜ್ಯದ ಎಲ್ಲಾ ಕಾಮಗಾರಿಗಳಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಂಪಣ್ಣವನರು ಆರೋಪ ಮಾಡಿದ್ದರು. ಆನಂತರ ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಆನಂತರ ಸಚಿವ ಮುನಿರತ್ನ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಾಗಾಗಿ ಸಚಿವ ಮುನಿರತ್ನ ಡಿ ಕೆಂಪಣ್ಣ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಯ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವಾರೆಂಟ್ ಜಾರಿ ಆಗಿದ್ದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರ ಸಹಿತ ಕೃಷ್ಣಾ ರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದಾರೆ

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಅರ್ಜಿಯಲ್ಲಿ “ಶ್ರೀ ಕೃಷ್ಣದೇವರಾಯ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದೆ. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ನಡೆಯುವುದು ಅನುಮಾನವಾಗಿದೆ. ಗುತ್ತಿಗೆದಾರರ ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಕೋರಿದ್ದರು.

ಇದನ್ನೂ ಓದಿ; 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...