Homeಮುಖಪುಟಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

- Advertisement -
- Advertisement -

ತೋಟಗಾರಿಕೆ ಸಚಿವ ಮುನಿರತ್ನರವರು 40% ಕಮಿಷನ್‍ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ಬಂಧನಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಸರ್ಕಾರ ನಡೆಸುತ್ತಿರುವ ಭಾರೀ ಭ್ರಷ್ಟಾಚಾರ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಸಮರ್ಪಕ ತನಿಖೆ ನಡೆಸುವುದು ಬಿಟ್ಟು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿರುವ 80 ವರ್ಷದ ಕೆಂಪಣ್ಣನವರನ್ನು ರಾತ್ರೋರಾತ್ರಿ ಬಂಧಿಸುವುದು ಎಷ್ಟು ಸರಿ? ಎಂದು ಹಲವರು ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಎಂತಹ  ನ್ಯಾಯ ವ್ಯವಸ್ಥೆಯಿದೆ? 40% ದಂಧೆಯನ್ನು ಬಯಲಿಗೆಳೆದ ವ್ಯಕ್ತಿಗೆ ಜೈಲು ಶಿಕ್ಷೆ. ಆದರೆ ಪಕ್ಷದ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಲ್ಲವೂ ಆಡಳಿತ ಪಕ್ಷದ ದುಷ್ಕೃತ್ಯಗಳನ್ನು ರಕ್ಷಿಸಲು ನಡೆಯುತ್ತಿದೆ ಎಂದು ಸಹನಾ ಎಂಬುವವರು ಕಿಡಿಕಾರಿದ್ದಾರೆ.

40% ಕಮಿಷನ್ ವಿಚಾರ ಬಹಿರಂಗಪಡೆಸಿದ ವ್ಯಕ್ತಿಯನ್ನು, 40% ಕಮಿಷನ್ ಪಡೆದ ಆರೋಪ ಹೊತ್ತ ವ್ಯಕ್ತಿಯಿಂದ ಬಂಧಿಸಲಾಗಿದೆ. ಕೆಂಪಣ್ಣನವರೆ, ಕಾನೂನಿನ ನ್ಯಾಯಾಲಯದಲ್ಲೂ, ಜನತಾ ನ್ಯಾಯಾಲಯದಲ್ಲೂ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಕೆಂಪಣ್ಣನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

40% ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ.‌ ಅದೂ ಮುನಿರತ್ನ ವಿರುದ್ಧ ಆರೋಪದ ಬಗ್ಗೆ. ‌ಹಾಗೆ ಮಾಡಿದರೆ ಎಲ್ಲಾ ಬಿಜೆಪಿ ನಾಯಕರನ್ನು ಬಂಧಿಸಬೇಕು, ಮುನಿರತ್ನ ಬಿಜೆಪಿ ಸೇರುವುದಕ್ಕೆ ಮುನ್ನ ‌ಭ್ರಷ್ಟರೇ ಆಗಿದ್ದರು, ನಂತರ ಪಾವನರಾದರು.‌ ಹೀಗೆ ಜನಸಾಮಾನ್ಯರನ್ನು ಹೆದರಿಸುವ ಕ್ರಮವನ್ನು ಕಂಡಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಅಕ್ಕಿ ಟ್ವೀಟ್ ಮಾಡಿದ್ದಾರೆ.

 

ರಾಜ್ಯದ ಎಲ್ಲಾ ಕಾಮಗಾರಿಗಳಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಂಪಣ್ಣವನರು ಆರೋಪ ಮಾಡಿದ್ದರು. ಆನಂತರ ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಆನಂತರ ಸಚಿವ ಮುನಿರತ್ನ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಾಗಾಗಿ ಸಚಿವ ಮುನಿರತ್ನ ಡಿ ಕೆಂಪಣ್ಣ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಯ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವಾರೆಂಟ್ ಜಾರಿ ಆಗಿದ್ದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರ ಸಹಿತ ಕೃಷ್ಣಾ ರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದಾರೆ

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಅರ್ಜಿಯಲ್ಲಿ “ಶ್ರೀ ಕೃಷ್ಣದೇವರಾಯ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದೆ. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ನಡೆಯುವುದು ಅನುಮಾನವಾಗಿದೆ. ಗುತ್ತಿಗೆದಾರರ ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಕೋರಿದ್ದರು.

ಇದನ್ನೂ ಓದಿ; 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...