Homeಮುಖಪುಟಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

ಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

- Advertisement -
- Advertisement -

ಮಹಾಮಳೆಯಿಂದಾಗಿ ಆಂಧ್ರ ಪ್ರದೇಶ ರಾಜ್ಯ ತತ್ತರಿಸಿದೆ. 17 ಮಂದಿ ಸಾವನ್ನಪ್ಪಿದ್ದು, 100 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೂರಾರು ಭಕ್ತಾದಿಗಳು ಪ್ರವಾಹದಲ್ಲಿ ಸಿಲುಕಿರುವುದನ್ನು ಧಾರ್ಮಿಕ ಕೇಂದ್ರವಾದ ತಿರುಪತಿಯ ದೃಶ್ಯಾವಳಿಗಳು ತೋರುತ್ತಿವೆ.

ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳೊಳಗೆ ಇನ್ನೂ 4 ಮಂದಿ ಸಿಲುಕಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸತ್ಯಬಾಬು ತಿಳಿಸಿದ್ದಾರೆ.

ಘಾಟಿ ರಸ್ತೆ ಹಾಗೂ ದೇವಸ್ತಾನವಿರುವ ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ. ತಿರುಪತಿ ಹೊರವಲಯದ ಸ್ವರ್ಣಮುಖಿ ನದಿ ಭೋರ್ಗರೆಯುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಮೂರು ರಾಜ್ಯ ಸಾರಿಗೆ ಬಸ್‌ಗಳು ಜಖಂಗೊಂಡಿದ್ದು, 12 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಪ್ರವಾಹದಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ.

ನವೆಂಬರ್ 25ರವರೆಗೆ ಕಡಪ ವಿಮಾನ ನಿಲ್ದಾಣ ಬಂದ್ ಆಗಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಪಂಬಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ಪಂಬಾ ಮತ್ತು ಶಬರಿಮಲೆ ಯಾತ್ರೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿರಿ: ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...