Homeಕರ್ನಾಟಕಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜನ ಗಣತಿಯೊಂದಿಗೆ ಜಾತಿ ಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಕಾವೇರಿ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯ ಶೇ.50ರ ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು.

ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ

ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿಯೊಂದಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ. ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಸಿಎಂ ಹೇಳಿದರು.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ

2015 ರಲ್ಲಿಯೇ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 192 ಕೋಟಿ ರೂಪಾಯಿ ವೆಚ್ಚ ಮಾಡಿ  1.33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದರಿಂದ ಪ್ರೇರಿತರಾಗಿ ಮತ್ತು  ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈಗ ಸಮೀಕ್ಷೆಗೆ ಮುಂದಾಗಿದೆ ಸಿಎಂ ಹೇಳಿದರು.

ಮೇ 9ಕ್ಕೆ ಸಚಿವ ಸಂಪುಟ ಸಭೆ

ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿರುವ  ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯ ಕುರಿತು ಮೇ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

ಶೇ.50 ಮೀಸಲಾತಿ ಮಿತಿಯನ್ನು ತೆಗೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15ನೇ ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಅದನ್ನೂ ಪರಿಗಣಿಸಬೇಕೆಂದು ಎಂದು ಆಗ್ರಹಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ

ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನ ಗಣತಿ, ಜಾತಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಸಚಿವರನ್ನು ಹೆದರಿಸಿ ವರದಿ ಪಡೆಯಲಿಲ್ಲ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಜಾತಿ ಗಣತಿ ಹಾಗೂ ಜನ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಾಡಿ ಹೊಗಳಿದ್ದು, ರಾಜ್ಯ ಸರ್ಕಾರದ ಸಮೀಕ್ಷೆಗೆ ಯಾವುದೇ ಪಾವಿತ್ರ್ಯತೆ ಇಲ್ಲ ಎಂದು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, “ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಜಾತಿ ಗಣತಿ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿದ ಕುಮಾರಸ್ವಾಮಿ, ವರದಿಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದರು.

ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ

ರಾಜ್ಯದ ಸಮೀಕ್ಷೆಯ ಬಗ್ಗೆ ಈ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದರು.

ನೆಹರೂ ಬಗ್ಗೆ ಅಪಪ್ರಚಾರ

ಧರ್ಮೇಂದ್ರ ಪ್ರಧಾನ್ ಅವರು ನೆಹರೂ ಅವರು ಹಿಂದೆ ಜಾತಿ ಗಣತಿಯನ್ನು ವಿರೋಧಿಸಿದ್ದರು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದೆಲ್ಲಾ ಸುಳ್ಳು ಹಾಗೂ ಅಪಪ್ರಚಾರ ಎಂದು ಹೇಳಿದರು.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...