Homeಮುಖಪುಟವರ್ಚುವಲ್ ಸಂಸತ್ ಅಧಿವೇಶನವನ್ನು ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ

ವರ್ಚುವಲ್ ಸಂಸತ್ ಅಧಿವೇಶನವನ್ನು ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಕೊರೊನಾದಿಂದಾಗಿ ಸಂಸತ್ ಅಧಿವೇಶನ ನಡೆಸಲು ಸಾಧ್ಯವಾಗದಿದ್ದರೆ ವರ್ಚುವಲ್ ಅಧಿವೇಶನವನ್ನು ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಲಡಾಖ್‌ನ ಗಾಲ್ವನ್‌ನಲ್ಲಿ ಉಂಟಾಗಿರುವ ಗಡಿ ವಿವಾದ, ಪೆಟ್ರೋಲ್ ಬೆಲೆ ಏರಿಕೆ, ಕೊರೋನಾ ಬಿಕ್ಕಟ್ಟು ಇತ್ಯಾದಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸಬೇಕಿರುವ ಹಿನ್ನೆಲೆಯಲ್ಲಿ ಕೂಡಲೇ ಸಂಸತ್ತಿನ ಅಧಿವೇಶನ ಕರೆಯಬೇಕು ಎಂದು ಅದು ಹೇಳಿದೆ.

ಪ್ರಸ್ತುತ ಚರ್ಚೆ ಮಾಡಬೇಕಾದ ಹಲವು ವಿಷಯಗಳಿದ್ದು, ಭಾರತ-ಚೀನಾ ಗಡಿ ಸಮಸ್ಯೆಯ ಬಗ್ಗೆ ಚರ್ಚಿಸಬೇಕಿದೆ. ಕೊರೋನಾ ರೋಗದ ಬಗ್ಗೆ ಸಮಾಲೋಚನೆ ಆಗಬೇಕಿದೆ. ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಆಗುತ್ತಿರುವ ಬಗ್ಗೆಯೂ ಚರ್ಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನ ಕರೆಯಬೇಕೆಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಒತ್ತಾಯಿಸಿದ್ದಾರೆ.

1962ರ ಯುದ್ಧದ ವೇಳೆ ಅಧಿವೇಶನ ನಡೆಸಲು ಒತ್ತಾಯಿಸಲಾಗಿತ್ತು. ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಕೂಡಾ ಒತ್ತಾಯಿಸಿದ್ದರು. ಈ ಒತ್ತಾಯವನ್ನು ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪುರಸ್ಕರಿಸಿ, ಪ್ರತಿಪಕ್ಷಗಳ ಮನವಿಗೆ ಸ್ಪಂದಿಸಿ ಅಧಿವೇಶನ ನಡೆಸಿತ್ತು. ಈಗಲೂ ಅದೇ ರೀತಿ ಪ್ರತಿಪಕ್ಷಗಳ ಮಾತಿಗೆ ಸ್ಪಂದಿಸಿ ಸಂಸತ್ ಅಧಿವೇಶನ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಸಂಸದೀಯ ಸಮಿತಿಗಳ ಸಭೆಗಳು ಕೂಡ ನಡೆಯುತ್ತಿಲ್ಲ. ಸಂಸದೀಯ ಸಮಿತಿಗಳ ಸಭೆಗಳು ಯಾಕೆ ಸ್ಥಗಿತಗೊಂಡಿವೆ? ಎಂದು ಕೇಂದ್ರ ಸರ್ಕಾರವನ್ನು ಪವನ್ ಖೇರಾ ಪ್ರಶ್ನಿಸಿದ್ದಾರೆ.

“ಸ್ಪೀಕರ್ ಸಂಸತ್ತನ್ನು ಮಟ್ಟಹಾಕಲು ಪ್ರಯತ್ನಿಸಬಾರದು. ಸಂಸತ್ ಅಧಿವೇಶನ ನಡೆಸದಿರುವುದು ದುರದೃಷ್ಟಕವಾಗಿದೆ. ರಷ್ಯಾ, ಭಾರತ, ಚೀನಾ ತ್ರಿಪಕ್ಷೀಯ ಶೃಂಗಸಭೆಯನ್ನು ವರ್ಚುವಲ್ ಆಗಿ ನಡೆಸಬಹುದು. ಆದರೆ ಸಂಸತ್ ಅಧಿವೇಶನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ವಿಷಯವನ್ನು ಬಹಳ ವಿಷಾದದಿಂದ ಹೇಳುತ್ತೇವೆ” ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.


ಓದಿ: ಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ : ರಾಹುಲ್ ಗಾಂಧಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...