Homeಮುಖಪುಟನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

ನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

- Advertisement -
- Advertisement -

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಝ್ ಮಾಡಲು ಬಸ್‌ನ್ನು ನಿಲ್ಲಿಸಿ ಅಮಾನಾತಾಗಿದ್ದ ಬಸ್ ಕಂಡೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಬಳಿ ತನ್ನ ನಿವಾಸದ ಪಕ್ಕದಲ್ಲಿ ರೈಲ್ವೇ ಟ್ರಾಕ್‌ನಲ್ಲಿ ಕಂಡೆಕ್ಟರ್ ಮೋಹಿತ್ ಯಾದವ್ ಅವರ ಮೃತದೇಹ ಪತ್ತೆಯಾಗಿದೆ. ಬಸ್ ಕಂಡಕ್ಟರ್ ಸಾವನ್ನು ಖಂಡಿಸಿ ಬರೇಲಿಯಲ್ಲಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಮೋಹಿತ್ ಯಾದವ್ (32) ಕೌಶಂಬಿಯಿಂದ ದೆಹಲಿಗೆ ತೆರಳುತ್ತಿದ್ದ UPSRTC ಬಸ್‌ನ ಕಂಡಕ್ಟರ್ ಆಗಿದ್ದರು. ದೆಹಲಿಯಿಂದ ಕೌಶಂಬಿಗೆ ತೆರಳುವಾಗ ರಾಂಪುರ ಬಳಿ ಕಂಡಕ್ಟರ್ ಮೋಹಿತ್ ಯಾದವ್ ಅವರು ಚಾಲಕ ಕೆಪಿ ಸಿಂಗ್ ಅವರಿಗೆ ಎರಡು ನಿಮಿಷಗಳ ಕಾಲ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ ಮತ್ತು ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ್ದರು.

ಇದಕ್ಕೆ ಬಸ್ಸಿನ ಇತರ ಪ್ರಯಾಣಿಕರು ಕಂಡಕ್ಟರ್ ಮತ್ತು ಬಸ್ ಚಾಲಕನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜೂನ್ 3, 2023ರಂದು ಸಂಭವಿಸಿದೆ. ಘಟನೆಯ ನಂತರ ಕಂಡಕ್ಟರ್ ಮತ್ತು ಬಸ್ ಚಾಲಕನನ್ನು ಅಮಾನತುಗೊಳಿಸಲಾಗಿತ್ತು.

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ ಕಾರಣಕ್ಕಾಗಿ ಅಮಾನತುಗೊಂಡ ನಂತರ ಕಂಡಕ್ಟರ್ ಮೋಹಿತ್ ಯಾದವ್ ಒತ್ತಡಕ್ಕೆ ಒಳಗಾಗಿದ್ದರು. ಮೋಹಿತ್ ಭಾನುವಾರ (ಆಗಸ್ಟ್ 27) ರಾತ್ರಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಆಗಸ್ಟ್ 28 ರಂದು ಅವರ ಮನೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಆಧಾರದ ಮೇಲೆ ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿಲ್ಲ. ಅಲ್ಲದೆ ಮೋಹಿತ್ ಯಾದವ್ ಮತ್ತು ಚಾಲಕ ಕೆ ಪಿ ಸಿಂಗ್ ತಮ್ಮ ಅಮಾನತು ವಿರುದ್ಧ ಮೇಲ್ಮನವಿ ಸಲ್ಲಿಸಲಿಲ್ಲ.

ಮೋಹಿತ್ ಯಾದವ್ ಮತ್ತು ಕೆ ಪಿ ಸಿಂಗ್ ವಿರುದ್ಧ ಅಧಿಕಾರಿಗಳು ತೆಗೆದುಕೊಂಡ ಕ್ರಮ ಸಮರ್ಥನೀಯವಲ್ಲ ಎಂದು ಯುಪಿಎಸ್‌ಆರ್‌ಟಿಸಿ ನೌಕರರ ಸಂಘ ಹೇಳಿದೆ. ಈ ವಿಷಯದ ಬಗ್ಗೆ ಕುಟುಂಬದವರು ದೂರು ನೀಡಿದರೆ ಅವರನ್ನು ಬೆಂಬಲಿಸುವುದಾಗಿ ಅವರು ಭರವಸೆ ನೀಡಿದ್ದರು. ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಿದ ನಂತರ ಹಣಕಾಸಿನ ಸಮಸ್ಯೆಯಿಂದ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಇದನ್ನು ಓದಿ: ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...