Homeಮುಖಪುಟನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

ನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

- Advertisement -
- Advertisement -

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಝ್ ಮಾಡಲು ಬಸ್‌ನ್ನು ನಿಲ್ಲಿಸಿ ಅಮಾನಾತಾಗಿದ್ದ ಬಸ್ ಕಂಡೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಬಳಿ ತನ್ನ ನಿವಾಸದ ಪಕ್ಕದಲ್ಲಿ ರೈಲ್ವೇ ಟ್ರಾಕ್‌ನಲ್ಲಿ ಕಂಡೆಕ್ಟರ್ ಮೋಹಿತ್ ಯಾದವ್ ಅವರ ಮೃತದೇಹ ಪತ್ತೆಯಾಗಿದೆ. ಬಸ್ ಕಂಡಕ್ಟರ್ ಸಾವನ್ನು ಖಂಡಿಸಿ ಬರೇಲಿಯಲ್ಲಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಮೋಹಿತ್ ಯಾದವ್ (32) ಕೌಶಂಬಿಯಿಂದ ದೆಹಲಿಗೆ ತೆರಳುತ್ತಿದ್ದ UPSRTC ಬಸ್‌ನ ಕಂಡಕ್ಟರ್ ಆಗಿದ್ದರು. ದೆಹಲಿಯಿಂದ ಕೌಶಂಬಿಗೆ ತೆರಳುವಾಗ ರಾಂಪುರ ಬಳಿ ಕಂಡಕ್ಟರ್ ಮೋಹಿತ್ ಯಾದವ್ ಅವರು ಚಾಲಕ ಕೆಪಿ ಸಿಂಗ್ ಅವರಿಗೆ ಎರಡು ನಿಮಿಷಗಳ ಕಾಲ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ ಮತ್ತು ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ್ದರು.

ಇದಕ್ಕೆ ಬಸ್ಸಿನ ಇತರ ಪ್ರಯಾಣಿಕರು ಕಂಡಕ್ಟರ್ ಮತ್ತು ಬಸ್ ಚಾಲಕನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜೂನ್ 3, 2023ರಂದು ಸಂಭವಿಸಿದೆ. ಘಟನೆಯ ನಂತರ ಕಂಡಕ್ಟರ್ ಮತ್ತು ಬಸ್ ಚಾಲಕನನ್ನು ಅಮಾನತುಗೊಳಿಸಲಾಗಿತ್ತು.

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ ಕಾರಣಕ್ಕಾಗಿ ಅಮಾನತುಗೊಂಡ ನಂತರ ಕಂಡಕ್ಟರ್ ಮೋಹಿತ್ ಯಾದವ್ ಒತ್ತಡಕ್ಕೆ ಒಳಗಾಗಿದ್ದರು. ಮೋಹಿತ್ ಭಾನುವಾರ (ಆಗಸ್ಟ್ 27) ರಾತ್ರಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಆಗಸ್ಟ್ 28 ರಂದು ಅವರ ಮನೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಆಧಾರದ ಮೇಲೆ ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿಲ್ಲ. ಅಲ್ಲದೆ ಮೋಹಿತ್ ಯಾದವ್ ಮತ್ತು ಚಾಲಕ ಕೆ ಪಿ ಸಿಂಗ್ ತಮ್ಮ ಅಮಾನತು ವಿರುದ್ಧ ಮೇಲ್ಮನವಿ ಸಲ್ಲಿಸಲಿಲ್ಲ.

ಮೋಹಿತ್ ಯಾದವ್ ಮತ್ತು ಕೆ ಪಿ ಸಿಂಗ್ ವಿರುದ್ಧ ಅಧಿಕಾರಿಗಳು ತೆಗೆದುಕೊಂಡ ಕ್ರಮ ಸಮರ್ಥನೀಯವಲ್ಲ ಎಂದು ಯುಪಿಎಸ್‌ಆರ್‌ಟಿಸಿ ನೌಕರರ ಸಂಘ ಹೇಳಿದೆ. ಈ ವಿಷಯದ ಬಗ್ಗೆ ಕುಟುಂಬದವರು ದೂರು ನೀಡಿದರೆ ಅವರನ್ನು ಬೆಂಬಲಿಸುವುದಾಗಿ ಅವರು ಭರವಸೆ ನೀಡಿದ್ದರು. ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಿದ ನಂತರ ಹಣಕಾಸಿನ ಸಮಸ್ಯೆಯಿಂದ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಇದನ್ನು ಓದಿ: ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...