Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...