Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...