Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...