Homeಮುಖಪುಟಎರಡು ಸಮುದಾಯದ ನಡುವೆ ಘರ್ಷಣೆ: 2000 ಜನರ ಮೇಲೆ ಎಫ್‌ಐಆರ್‌‌!

ಎರಡು ಸಮುದಾಯದ ನಡುವೆ ಘರ್ಷಣೆ: 2000 ಜನರ ಮೇಲೆ ಎಫ್‌ಐಆರ್‌‌!

- Advertisement -
- Advertisement -

ಗುಜರಾತ್‌ನಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 2,000 ಅಪರಿಚಿತ ಜನರ ವಿರುದ್ದ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಘಟನೆಯಲ್ಲಿ ಆರು ಪೊಲೀಸರು ಮತ್ತು ಸುಮಾರು 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್‌ನ ಗಿರ್‌ ಸೋಮನಾಥದ ಜಿಲ್ಲೆಯ ಉನಾ ತಾಲ್ಲೂಕಿನ ನವ ಬಂದರ್‌ ಎಂಬ ಗ್ರಾಮದಲ್ಲಿ ಘಟನೆ ನಡೆಸಿದ್ದು, ಎಫ್‌ಐಆರ್‌ನಲ್ಲಿ 47 ಜನರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ಹಳ್ಳಿಯ ಜೆಟ್ಟಿಯೊಂದರಲ್ಲಿ ಎರಡು ಮೀನುಗಾರಿಕಾ ದೋಣಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಈ ಕಾರಣಕ್ಕಾಗಿ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದ್ದು, ನಂತರ ಅದು ಘರ್ಷಣೆಗೆ ತಿರುಗಿದೆ ಎಂದು ಅವರು ವಿವರಿಸಿದ್ದಾರೆ.

ಎರಡು ಸಮುದಾಯಗಳಿಗೆ ಸೇರಿದ ಸುಮಾರು 1,500 ರಿಂದ 2,000 ಜನರು ದೊಣ್ಣೆ, ಕತ್ತಿ, ಕಬ್ಬಿಣ ಮತ್ತು ಪ್ಲಾಸ್ಟಿಕ್ ಪೈಪುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಲ್ಲದೆ, ಜನರ ಗುಂಪಿನ ಮೇಲೆ ಕಲ್ಲು ಮತ್ತು ಖಾಲಿ ಗಾಜಿನ ಬಾಟಲಿಗಳನ್ನು ಸಹ ಎಸೆದಿದ್ದಾರೆ ಎಂದು ನವ ಬಂದರ್ ಸಾಗರ ಪೊಲೀಸ್‌ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಜನಸಮೂಹವನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದಾಗ, ಗಲಭೆಕೋರರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದು, ಈ ವೇಳೆ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಜಾಟ್, ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಘರ್ಷಣೆಗೆ ಸಂಬಂಧಿಸಿದಂತೆ, ಐಪಿಸಿ ಸೆಕ್ಷನ್ಸ್ 307 (ಕೊಲೆ ಯತ್ನ), 332, 333 (ಸ್ವಯಂಪ್ರೇರಣೆಯಿಂದ ಸರ್ಕಾರಿ ನೌಕರನಿಗೆ ತೀವ್ರ ನೋವನ್ನುಂಟುಮಾಡುವುದು), 337, 338 (ನಿರ್ಲಕ್ಷ್ಯದಿಂದ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವುದು), 143 (ಕಾನೂನುಬಾಹಿರ ಸಭೆ), 147 ಮತ್ತು 148 (ಗಲಭೆ) ಅಡಿಯಲ್ಲಿ ಭಾನುವಾರ ತಡರಾತ್ರಿ ಎರಡೂ ಸಮುದಾಯಗಳ 47 ಜನರ ಹೆಸರು ಸೇರಿದಂತೆ 1,500 ರಿಂದ 2,000 ಅಪರಿಚಿತ ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘರ್ಷಣೆಯಲ್ಲಿ ಭಾಗಿಯಾಗಿದ್ದ ಹಲವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘರ್ಷಣೆಯ ಸಂದರ್ಭದಲ್ಲಿ ಹತ್ತಿರದ ಮೂರು ಪೊಲೀಸ್ ಠಾಣೆಗಳಾದ ಉನಾ, ಗಿರ್ ಗಡಾಡಾ ಮತ್ತು ಕೊಡಿನಾರ್ ಮತ್ತು ಸ್ಥಳೀಯ ಅಪರಾಧ ಶಾಖೆ ಮತ್ತು ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಗಳನ್ನು ಒಳಗೊಂಡ ದೊಡ್ಡ ಪೊಲೀಸ್ ತಂಡವು ಜನಸಮೂಹವನ್ನು ನಿಯಂತ್ರಿಸಲು ಘರ್ಷಣೆಯ ಸ್ಥಳಕ್ಕೆ ಧಾವಿಸಿತ್ತು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...