Homeಮುಖಪುಟಮುಸ್ಲಿಂ ವಿವಾಹ ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ವಿಧಾನಸಭೆಯಿಂದ ಹೊರನಡೆದ ಶಾಸಕರು

ಮುಸ್ಲಿಂ ವಿವಾಹ ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ವಿಧಾನಸಭೆಯಿಂದ ಹೊರನಡೆದ ಶಾಸಕರು

- Advertisement -
- Advertisement -

‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ-1935’ನ್ನು ರದ್ದುಪಡಿಸುವ ಅಸ್ಸಾಂನ ಬಿಜೆಪಿ ಸರಕಾರದ ಸಂಪುಟದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಶಾಸಕರು ಅಸ್ಸಾಂ ವಿಧಾನಸಭೆಯಿಂದ ಹೊರ ನಡೆದಿದ್ದಾರೆ.

‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ-1935’ನ್ನು ರದ್ದುಪಡಿಸುವ ಅಸ್ಸಾಂ  ಕ್ಯಾಬಿನೆಟ್ ನಿರ್ಧಾರದ ಬಗ್ಗೆ ಚರ್ಚಿಸಲು ಎಐಯುಡಿಎಫ್ ತಡೆ ನಿರ್ಣಯವನ್ನು ಮಂಡಿಸಿತ್ತು, ಅದನ್ನು ಸ್ಪೀಕರ್ ಬಿಸ್ವಜಿತ್ ಡೈಮರಿ ತಿರಸ್ಕರಿಸಿದ್ದರು. ಮೂಲ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸದೆ ತಿದ್ದುಪಡಿಗಳನ್ನು ಮಾಡಬಹುದಿತ್ತು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಜ್ಯದಲ್ಲಿ ಬಾಲ್ಯವಿವಾಹದ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಸ್ಸಾಂ ಕ್ಯಾಬಿನೆಟ್ ಶುಕ್ರವಾರ ಕಾಯ್ದೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಅಂಗೀಕರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಶರ್ಮಾ, ಬಾಲ್ಯವಿವಾಹವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಸೋಮವಾರ ಸದನದಲ್ಲಿ ಹೇಳಿದ್ದು, ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಚಿವ ಸಂಪುಟದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಸದನದಿಂದ ಹೊರನಡೆದಿದೆ. ಎಐಯುಡಿಎಫ್ ಶಾಸಕರು ಆರಂಭದಲ್ಲಿ ಘೋಷಣೆಗಳನ್ನು ಕೂಗಿದರು ಮತ್ತು ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ.

ಅಸ್ಸಾಂ ಕ್ಯಾಬಿನೆಟ್‌ ‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ’ಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಾಯಿದೆಯು ವಧು ಮತ್ತು ವರನ ಕಾನೂನುಬದ್ಧ ವಯಸ್ಸನ್ನು 18 ಮತ್ತು 21 ಆಗದಿದ್ದರೂ ವಿವಾಹ ನೋಂದಣಿಯನ್ನು ಅನುಮತಿಸುವ ನಿಬಂಧನೆಗಳನ್ನು ಒಳಗೊಂಡಿತ್ತು. ಇದೀಗ ಬಾಲ್ಯವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ ಎಂದು ಅಸ್ಸಾಂ ಸಿಎಂ ಹೇಮಂತ್‌ ಬಿಸ್ವಾ ಶರ್ಮಾ ಹೇಳಿದ್ದರು.

ಈ ಕ್ರಮವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ದೃಷ್ಟಿಯಲ್ಲಿ ತೆಗೆದುಕೊಂಡ ಒಂದು ಹೆಜ್ಜೆಯಾಗಿದೆ ಎಂದು ಅಸ್ಸಾಂ ಸಚಿವ ಜಯಂತ ಮಲ್ಲ ಬರುವಾ ಅವರು ಮಾದ್ಯಮಗಳಿಗೆ ತಿಳಿಸಿದ್ದರು. ಕಾನೂನು ಪ್ರಸ್ತುತ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಸ್ವಯಂಪ್ರೇರಿತ ನೋಂದಣಿಯ ಅವಕಾಶವನ್ನು ಒದಗಿಸುತ್ತದೆ. ಕಾನೂನನ್ನು ರದ್ದುಗೊಳಿಸಿದ ನಂತರ ಮುಸ್ಲಿಮರು ಮದುವೆ ಮತ್ತು ವಿಚ್ಛೇದನವನ್ನು ಸುಲಭವಾಗಿ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಕಾನೂನನ್ನು ರದ್ದುಗೊಳಿಸಿದ ನಂತರ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಿಜಿಸ್ಟ್ರಾರ್‌ಗಳ ವ್ಯಾಪ್ತಿಗೆ ಇದು ಬರಲಿದೆ ಎಂದು ಹೇಳಲಾಗಿದೆ. ಎಲ್ಲಾ ವಿವಾಹಗಳನ್ನು ‘ವಿಶೇಷ ವಿವಾಹ ಕಾಯ್ದೆಯಡಿ’ ನೋಂದಾಯಿಸಬೇಕೆಂದು ಅಸ್ಸಾಂ ಸರ್ಕಾರ ಬಯಸುತ್ತದೆ ಎಂದು ಅಸ್ಸಾಂ ಸಚಿವ ಜಯಂತ ಬರುವಾ ಹೇಳಿದ್ದರು.

ಇದನ್ನು ಓದಿ: ಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...