Homeಮುಖಪುಟಮುಸ್ಲಿಂ ವಿವಾಹ ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ವಿಧಾನಸಭೆಯಿಂದ ಹೊರನಡೆದ ಶಾಸಕರು

ಮುಸ್ಲಿಂ ವಿವಾಹ ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ವಿಧಾನಸಭೆಯಿಂದ ಹೊರನಡೆದ ಶಾಸಕರು

- Advertisement -
- Advertisement -

‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ-1935’ನ್ನು ರದ್ದುಪಡಿಸುವ ಅಸ್ಸಾಂನ ಬಿಜೆಪಿ ಸರಕಾರದ ಸಂಪುಟದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಶಾಸಕರು ಅಸ್ಸಾಂ ವಿಧಾನಸಭೆಯಿಂದ ಹೊರ ನಡೆದಿದ್ದಾರೆ.

‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ-1935’ನ್ನು ರದ್ದುಪಡಿಸುವ ಅಸ್ಸಾಂ  ಕ್ಯಾಬಿನೆಟ್ ನಿರ್ಧಾರದ ಬಗ್ಗೆ ಚರ್ಚಿಸಲು ಎಐಯುಡಿಎಫ್ ತಡೆ ನಿರ್ಣಯವನ್ನು ಮಂಡಿಸಿತ್ತು, ಅದನ್ನು ಸ್ಪೀಕರ್ ಬಿಸ್ವಜಿತ್ ಡೈಮರಿ ತಿರಸ್ಕರಿಸಿದ್ದರು. ಮೂಲ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸದೆ ತಿದ್ದುಪಡಿಗಳನ್ನು ಮಾಡಬಹುದಿತ್ತು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಜ್ಯದಲ್ಲಿ ಬಾಲ್ಯವಿವಾಹದ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಸ್ಸಾಂ ಕ್ಯಾಬಿನೆಟ್ ಶುಕ್ರವಾರ ಕಾಯ್ದೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಅಂಗೀಕರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಶರ್ಮಾ, ಬಾಲ್ಯವಿವಾಹವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಸೋಮವಾರ ಸದನದಲ್ಲಿ ಹೇಳಿದ್ದು, ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಚಿವ ಸಂಪುಟದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಸದನದಿಂದ ಹೊರನಡೆದಿದೆ. ಎಐಯುಡಿಎಫ್ ಶಾಸಕರು ಆರಂಭದಲ್ಲಿ ಘೋಷಣೆಗಳನ್ನು ಕೂಗಿದರು ಮತ್ತು ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ.

ಅಸ್ಸಾಂ ಕ್ಯಾಬಿನೆಟ್‌ ‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ’ಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಾಯಿದೆಯು ವಧು ಮತ್ತು ವರನ ಕಾನೂನುಬದ್ಧ ವಯಸ್ಸನ್ನು 18 ಮತ್ತು 21 ಆಗದಿದ್ದರೂ ವಿವಾಹ ನೋಂದಣಿಯನ್ನು ಅನುಮತಿಸುವ ನಿಬಂಧನೆಗಳನ್ನು ಒಳಗೊಂಡಿತ್ತು. ಇದೀಗ ಬಾಲ್ಯವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ ಎಂದು ಅಸ್ಸಾಂ ಸಿಎಂ ಹೇಮಂತ್‌ ಬಿಸ್ವಾ ಶರ್ಮಾ ಹೇಳಿದ್ದರು.

ಈ ಕ್ರಮವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ದೃಷ್ಟಿಯಲ್ಲಿ ತೆಗೆದುಕೊಂಡ ಒಂದು ಹೆಜ್ಜೆಯಾಗಿದೆ ಎಂದು ಅಸ್ಸಾಂ ಸಚಿವ ಜಯಂತ ಮಲ್ಲ ಬರುವಾ ಅವರು ಮಾದ್ಯಮಗಳಿಗೆ ತಿಳಿಸಿದ್ದರು. ಕಾನೂನು ಪ್ರಸ್ತುತ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಸ್ವಯಂಪ್ರೇರಿತ ನೋಂದಣಿಯ ಅವಕಾಶವನ್ನು ಒದಗಿಸುತ್ತದೆ. ಕಾನೂನನ್ನು ರದ್ದುಗೊಳಿಸಿದ ನಂತರ ಮುಸ್ಲಿಮರು ಮದುವೆ ಮತ್ತು ವಿಚ್ಛೇದನವನ್ನು ಸುಲಭವಾಗಿ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಕಾನೂನನ್ನು ರದ್ದುಗೊಳಿಸಿದ ನಂತರ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಿಜಿಸ್ಟ್ರಾರ್‌ಗಳ ವ್ಯಾಪ್ತಿಗೆ ಇದು ಬರಲಿದೆ ಎಂದು ಹೇಳಲಾಗಿದೆ. ಎಲ್ಲಾ ವಿವಾಹಗಳನ್ನು ‘ವಿಶೇಷ ವಿವಾಹ ಕಾಯ್ದೆಯಡಿ’ ನೋಂದಾಯಿಸಬೇಕೆಂದು ಅಸ್ಸಾಂ ಸರ್ಕಾರ ಬಯಸುತ್ತದೆ ಎಂದು ಅಸ್ಸಾಂ ಸಚಿವ ಜಯಂತ ಬರುವಾ ಹೇಳಿದ್ದರು.

ಇದನ್ನು ಓದಿ: ಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...