Homeಮುಖಪುಟಚುನಾವಣಾ ಬಾಂಡ್‌: ಬಿಜೆಪಿ ಲೂಟಿಯನ್ನು ಮುಂದುವರಿಸಲು ಬಯಸುತ್ತಿದೆ; ಕಾಂಗ್ರೆಸ್‌

ಚುನಾವಣಾ ಬಾಂಡ್‌: ಬಿಜೆಪಿ ಲೂಟಿಯನ್ನು ಮುಂದುವರಿಸಲು ಬಯಸುತ್ತಿದೆ; ಕಾಂಗ್ರೆಸ್‌

- Advertisement -
- Advertisement -

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಯೋಜನೆಯನ್ನು ವಾಪಾಸ್ಸು ತರಲಾಗುವುದು ಎಂಬ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ಹೇಳಿಕೆಗೆ ಕಾಂಗ್ರೆಸ್ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, 4 ಲಕ್ಷ ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನಂತರ ಅವರು ಮತ್ತೆ ಲೂಟಿ ಮಾಡಲು ಮುಂದಾಗುತ್ತಾರೆ ಎಂದು ಹೇಳಿದೆ.

2024ರ ಸಾರ್ವತ್ರಿಕ ಚುನಾವಣೆಯ ನಂತರ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ಮರಳಿ ತರಲು ಉದ್ದೇಶಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹಿಂದೂಸ್ತಾನ್ ಟೈಮ್ಸ್‌ ಜೊತೆಗಿನ ಸಂದರ್ಶನದಲ್ಲಿ ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಸುಪ್ರೀಂ ಕೋರ್ಟ್ ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಎಲೆಕ್ಟೋರಲ್ ಬಾಂಡ್‌ಗಳನ್ನು ಮರಳಿ ತರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. #PayPM ಹಗರಣದಲ್ಲಿ ಬಿಜೆಪಿ 4 ಲಕ್ಷ ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಅವರು ಲೂಟಿಯನ್ನು ಮುಂದುವರಿಸಲು ಬಯಸಿದ್ದಾರೆ ಎಂದು ಹೇಳಿದ್ದಾರೆ.

ಜೈರಾಮ್‌ ರಮೇಶ್ ಅವರು “ಪೇಪಿಎಂನ ನಾಲ್ಕು ವಿಧಾನಗಳು” ಎಂದು ಉಲ್ಲೇಖಿಸಿದ್ದಾರೆ.
ಪ್ರಿಪೇಯ್ಡ್ ಲಂಚ – ಚಂದಾ ದೋ, ಧಂಧಾ ಲೋ. ಪೋಸ್ಟ್ ಪೇಯ್ಡ್ ಲಂಚ – ಥೇಕಾ ಡೋ, ರಿಶ್ವತ್ ಲೋ(Theka Do, Rishvat Lo). ಪ್ರಿ-ಪೇಯ್ಡ್ ಮತ್ತು ಪೋಸ್ಟ್-ಪೇಯ್ಡ್ ಲಂಚಗಳ ಸಂಯೋಜಿತ ವೆಚ್ಚ: ರೂ 3.8 ಲಕ್ಷ ಕೋಟಿ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ. ದಾಳಿ ನಂತರದ ಲಂಚ – ಹಫ್ತಾ ವಸೂಲಿ, ರೈಡ್ ನಂತರದ ಲಂಚದ ವೆಚ್ಚ: 1,853 ಕೋಟಿ ರೂ.ಎಂದು ಅವರು ಹೇಳಿದ್ದಾರೆ. ಇದು ನಮ್ಮ ಜೀವಮಾನದ ಅತ್ಯಂತ ಪ್ರಮುಖ ಚುನಾವಣೆ. ತಳಮಟ್ಟದ ವರದಿಗಳು ಸ್ಪಷ್ಟಪಡಿಸುವಂತೆ, ಈ ಭ್ರಷ್ಟ ಬ್ರಿಗೇಡ್ ತೊಲಗುವ ಹಾದಿಯಲ್ಲಿದೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್‌ನ ನಿರ್ದೇಶನದ ನಂತರ, ಚುನಾವಣಾ ಬಾಂಡ್‌ಗಳ ಅಧಿಕೃತ ಮಾರಾಟಗಾರರಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದೆ. ಚುನಾವಣಾ ಬಾಂಡ್‌ಗಳ ದತ್ತಾಂಶವು ಬಿಜೆಪಿಯ ಕೊಡುಕೊಳ್ಳುವಿಕೆ ಮತ್ತು ದೇಣಿಗೆ ವಿರುದ್ಧ ಕಂಪನಿಗಳಿಗೆ ರಕ್ಷಣೆ ನೀಡುವಂತಹ ಭ್ರಷ್ಟ ತಂತ್ರಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿ: ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...