Homeಮುಖಪುಟಮಹಿಳಾ ಮೀಸಲಾತಿ ಬಿಲ್‌: ಮೋದಿ ಸರಕಾರದ ದ್ರೋಹ ಬಯಲುಗೊಳಿಸಲು 21 ನಗರಗಳಲ್ಲಿ ಪತ್ರಿಕಾಗೋಷ್ಟಿ; ಕಾಂಗ್ರೆಸ್

ಮಹಿಳಾ ಮೀಸಲಾತಿ ಬಿಲ್‌: ಮೋದಿ ಸರಕಾರದ ದ್ರೋಹ ಬಯಲುಗೊಳಿಸಲು 21 ನಗರಗಳಲ್ಲಿ ಪತ್ರಿಕಾಗೋಷ್ಟಿ; ಕಾಂಗ್ರೆಸ್

- Advertisement -
- Advertisement -

ಕಳೆದ ವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ 21 ನಗರಗಳಲ್ಲಿ 21 ಪತ್ರಿಕಾಗೋಷ್ಠಿಗಳನ್ನು ನಡೆಸಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ದ್ರೋಹವನ್ನು ಬಯಲಿಗೆಳೆಯಲಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಪವನ್ ಖೇರಾ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, 21 ನಗರಗಳಲ್ಲಿ, 21 ಮಹಿಳಾ ನಾಯಕರು ಒಂದೇ ಅಜೆಂಡಾದಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಮೋದಿ ಸರ್ಕಾರದ ದ್ರೋಹವನ್ನು ಬಹಿರಂಗಪಡಿಸಲಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ ಕಾಂಗ್ರೆಸ್‌ ಮಹಿಳಾ ಮೀಸಲಾತಿ ಬಿಲ್‌ನ್ನು ಯಾವುದೇ ತಡೆಯಿಲ್ಲದೆ ಶೀಘ್ರ ಜಾರಿಗೆ ಆಗ್ರಹಿಸಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಕುರಿತು ಮಾತನಾಡಿದ್ದು, ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಬಿಲ್‌ನ್ನು ನಾಳೆಯಿಂದಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದು, ಮಹಿಳಾ ಮೀಸಲಾತಿ ಮಸೂದೆ, ಜಾತಿಜನಗಣತಿ, ಕ್ಷೇತ್ರವಿಂಗಡನೆಗೆ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.

ಭಾರತೀಯ ಮಹಿಳೆಯರು ರಾಜಕೀಯದಲ್ಲಿ ಭಾಗವಹಿಸಲು ಅವಕಾಶವನ್ನು  ಪಂಚಾಯತಿ ರಾಜ್‌ನಲ್ಲಿ 33% ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಮಾಡಿದೆ. ನಾವು ಪಂಚಾಯತ್ ರಾಜ್‌ನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಆರ್‌ಎಸ್‌ಎಸ್ ಮಹಿಳೆಯರನ್ನು ಅನುಮತಿಸುವುದಿಲ್ಲ ಎನ್ನುವ ಅಂಶವನ್ನು ಅರ್ಥೈಸಿಕೊಳ್ಳಬೇಕಿದೆ. ಮಹಿಳಾ ಸಬಲೀಕರಣದಲ್ಲಿ ಯಾರು ಆಸಕ್ತಿ ಹೊಂದಿದ್ದಾರೆ ಎಂಬುವುದು ಇದರಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬವಾದ ಬಗ್ಗೆ ಸರ್ಕಾರವನ್ನು ಟೀಕಿಸಿದ್ದಾರೆ. ಕ್ಷೇತ್ರವಾರು ವಿಂಗಡನೆ ಮತ್ತು ಜನಗಣತಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ ಆಗಿದೆ. ಅದರಲ್ಲಿ ಜನಗಣತಿ ಮತ್ತು ಕ್ಷೇತ್ರ ವಿಂಗಡನೆ ಮಾಡಬೇಕಾಗಿದೆ ಎಂದು ನಮಗೆ ಎರಡು ಅಡಿಟಿಪ್ಪಣಿಗಳು ಕಾಣಿಸಿಕೊಂಡವು. ಇವೆರಡಕ್ಕೂ ವರ್ಷಗಳು ಬೇಕಾಗುತ್ತವೆ. ನಿಜವೆಂದರೆ ಮೀಸಲಾತಿ ಇಂದು ಜಾರಿಗೆ ತರಬಹುದು. ಇದು ಸಂಕೀರ್ಣವಾದ ವಿಷಯವಲ್ಲ ಆದರೆ ಸರ್ಕಾರವು ಅದನ್ನು ಮಾಡಲು ಬಯಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸರ್ಕಾರ  ಮಸೂದೆ ಅಂಗೀಕರಿಸಿದೆ. ಆದರೆ ಇದು ಇನ್ನು 10 ವರ್ಷಗಳ ನಂತರ ಜಾರಿಗೆ ಬರಲಿದೆ. ಇದು ಜಾರಿಗೆ ಬರುತ್ತದೋ, ಇಲ್ಲವೋ ಎಂದು  ಯಾರಿಗೂ ತಿಳಿದಿಲ್ಲ. ಇದು ಗೊಂದಲದ ಮತ್ತು ಜನರ ಗಮನ ಬೇರೆಡೆ ಸೆಳೆಯುವ ತಂತ್ರ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

 

ಇದನ್ನು ಓದಿ: ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....