Homeಮುಖಪುಟ'ಜವಹರಲಾಲ್ ನೆಹರೂ ವಿವಿ'ಯ ಪ್ರತಿಯೊಬ್ಬರೂ ಅಭಿನಂದನಾರ್ಹರು - ರಾಮನಾಥ್ ಕೋವಿಂದ್

‘ಜವಹರಲಾಲ್ ನೆಹರೂ ವಿವಿ’ಯ ಪ್ರತಿಯೊಬ್ಬರೂ ಅಭಿನಂದನಾರ್ಹರು – ರಾಮನಾಥ್ ಕೋವಿಂದ್

ಜೆಎನ್‌ಯು ಕುರಿತು ಕೆಲವು ಮುಂಚೂಣಿಯ ನಾಯಕರು ತಪ್ಪಾಗಿ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಈ ಅಭಿಪ್ರಾಯವು ಅತ್ಯಂತ ಮಹತ್ವದ್ದೆನಿಸಿದೆ.

- Advertisement -
- Advertisement -

ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯವನ್ನು ಹೊಗಳಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, “ಇಲ್ಲಿನ ಬೋಧನೆ ಮತ್ತು ಸಂಶೋಧನೆ ಶಿಕ್ಷಣ ತಜ್ಞರ ಜಗತ್ತಿನಲ್ಲಿ ಅಗಾಧ ಪರಿಣಾಮ ಬೀರಿದೆ” ಎಂದು ಹೇಳಿದ್ದಾರೆ. ಜೆಎನ್‌ಯು ವಿವಿಯ 2020ರ ಘಟಿಕೋತ್ಸವದಲ್ಲಿ ಮಾತನಾಡಿದ ರಾಷ್ಟ್ರಪತಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿಗಳ ಹೇಳಿಕೆಯ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಸಮಾಜ ವಿಜ್ಞಾನದಿಂದ ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟವನ್ನು ಹೊಂದಿರುವುದಕ್ಕಾಗಿ ಜೆಎನ್‌ಯುಗೆ ಸಂಬಂಧಿಸಿದ ಪ್ರತಿಯೊಬ್ಬ ವ್ಯಕ್ತಿಯನ್ನು ನಾನು ಪ್ರಶಂಸಿಸುತ್ತೇನೆ. ಇಲ್ಲಿನ ಬೋಧನೆ ಮತ್ತು ಸಂಶೋಧನೆ ಎರಡೂ ಶಿಕ್ಷಣ ತಜ್ಞರ ಜಗತ್ತಿನ ಮೇಲೆ ಅಗಾಧ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ” ಎಂಬುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

“ಸಮಗ್ರ ಶಿಕ್ಷಣದ ಪರಿದೃಷ್ಟಿಯಲ್ಲಿ, ಯುವಜನರ ಕೌಶಲ್ಯ, ಅಭಿವೃದ್ಧಿ ಮತ್ತು ಉದ್ಯೋಗವನ್ನು ಒದಗಿಸುವ ಉದ್ದೇಶದಿಂದ ಹೊಸ ಅಧ್ಯಯನ ಕ್ಷೇತ್ರಗಳಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಜೆಎನ್‌ಯು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ಜ್ಞಾನ ಆಧಾರಿತ ಉದ್ಯಮಗಳನ್ನು ರಚಿಸಲು ಮತ್ತು ನಮ್ಮ ಆರ್ಥಿಕತೆಗೆ ಕೊಡುಗೆ ನೀಡಲು ಸಹಕಾರಿಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಕುರಿತು ಕೆಲವು ಮುಂಚೂಣಿಯ ನಾಯಕರು ತಪ್ಪಾಗಿ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಈ ಅಭಿಪ್ರಾಯವು ಅತ್ಯಂತ ಮಹತ್ವದ್ದೆನಿಸಿದೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೇ ಸಾಮಾಜಿಕ ಜ್ಞಾನವನ್ನೂ ಆಧರಿಸಿ ಶಿಕ್ಷಣ ನೀಡುತ್ತಿರುವ ಜೆಎನ್‌ಯು ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ವಿವಿಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಇಂದು ಜಗತ್ತಿನಾದ್ಯಂತ ದೊಡ್ಡ ವಿದ್ವಾಂಸರಾಗಿ ಹೊರಹೊಮ್ಮಿದ್ದಾರೆ.

ಆದರೆ ಇತ್ತೀಚೆಗೆ ಈ ವಿವಿಯ ವರ್ಚಸ್ಸನ್ನು ಕುಂದಿಸುವ ಕೆಲಸಗಳು ಪ್ರಭುತ್ವದಿಂದಲೇ ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಿಸುತ್ತಿದೆ. ಸಾಂವಿಧಾನಿಕ ಮೌಲ್ಯಗಳು, ಪ್ರಶ್ನಿಸುವ ಹಕ್ಕನ್ನು ಧಮನಿಸುವ ಭಾಗವಾಗಿ ಜೆಎನ್‌ಯು ವಿದ್ಯಾರ್ಥಿ ಮತ್ತು ವಿದ್ವಾಂಸರ ಮೇಲೆ ಪ್ರಭುತ್ವ ಹಗೆ ಸಾಧಿಸುತ್ತಿದೆ.


ಇದನ್ನೂ ಓದಿ: ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...