Homeಮುಖಪುಟ'ಜವಹರಲಾಲ್ ನೆಹರೂ ವಿವಿ'ಯ ಪ್ರತಿಯೊಬ್ಬರೂ ಅಭಿನಂದನಾರ್ಹರು - ರಾಮನಾಥ್ ಕೋವಿಂದ್

‘ಜವಹರಲಾಲ್ ನೆಹರೂ ವಿವಿ’ಯ ಪ್ರತಿಯೊಬ್ಬರೂ ಅಭಿನಂದನಾರ್ಹರು – ರಾಮನಾಥ್ ಕೋವಿಂದ್

ಜೆಎನ್‌ಯು ಕುರಿತು ಕೆಲವು ಮುಂಚೂಣಿಯ ನಾಯಕರು ತಪ್ಪಾಗಿ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಈ ಅಭಿಪ್ರಾಯವು ಅತ್ಯಂತ ಮಹತ್ವದ್ದೆನಿಸಿದೆ.

- Advertisement -
- Advertisement -

ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯವನ್ನು ಹೊಗಳಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, “ಇಲ್ಲಿನ ಬೋಧನೆ ಮತ್ತು ಸಂಶೋಧನೆ ಶಿಕ್ಷಣ ತಜ್ಞರ ಜಗತ್ತಿನಲ್ಲಿ ಅಗಾಧ ಪರಿಣಾಮ ಬೀರಿದೆ” ಎಂದು ಹೇಳಿದ್ದಾರೆ. ಜೆಎನ್‌ಯು ವಿವಿಯ 2020ರ ಘಟಿಕೋತ್ಸವದಲ್ಲಿ ಮಾತನಾಡಿದ ರಾಷ್ಟ್ರಪತಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿಗಳ ಹೇಳಿಕೆಯ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಸಮಾಜ ವಿಜ್ಞಾನದಿಂದ ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟವನ್ನು ಹೊಂದಿರುವುದಕ್ಕಾಗಿ ಜೆಎನ್‌ಯುಗೆ ಸಂಬಂಧಿಸಿದ ಪ್ರತಿಯೊಬ್ಬ ವ್ಯಕ್ತಿಯನ್ನು ನಾನು ಪ್ರಶಂಸಿಸುತ್ತೇನೆ. ಇಲ್ಲಿನ ಬೋಧನೆ ಮತ್ತು ಸಂಶೋಧನೆ ಎರಡೂ ಶಿಕ್ಷಣ ತಜ್ಞರ ಜಗತ್ತಿನ ಮೇಲೆ ಅಗಾಧ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ” ಎಂಬುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

“ಸಮಗ್ರ ಶಿಕ್ಷಣದ ಪರಿದೃಷ್ಟಿಯಲ್ಲಿ, ಯುವಜನರ ಕೌಶಲ್ಯ, ಅಭಿವೃದ್ಧಿ ಮತ್ತು ಉದ್ಯೋಗವನ್ನು ಒದಗಿಸುವ ಉದ್ದೇಶದಿಂದ ಹೊಸ ಅಧ್ಯಯನ ಕ್ಷೇತ್ರಗಳಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಜೆಎನ್‌ಯು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ಜ್ಞಾನ ಆಧಾರಿತ ಉದ್ಯಮಗಳನ್ನು ರಚಿಸಲು ಮತ್ತು ನಮ್ಮ ಆರ್ಥಿಕತೆಗೆ ಕೊಡುಗೆ ನೀಡಲು ಸಹಕಾರಿಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಕುರಿತು ಕೆಲವು ಮುಂಚೂಣಿಯ ನಾಯಕರು ತಪ್ಪಾಗಿ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಈ ಅಭಿಪ್ರಾಯವು ಅತ್ಯಂತ ಮಹತ್ವದ್ದೆನಿಸಿದೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೇ ಸಾಮಾಜಿಕ ಜ್ಞಾನವನ್ನೂ ಆಧರಿಸಿ ಶಿಕ್ಷಣ ನೀಡುತ್ತಿರುವ ಜೆಎನ್‌ಯು ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ವಿವಿಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಇಂದು ಜಗತ್ತಿನಾದ್ಯಂತ ದೊಡ್ಡ ವಿದ್ವಾಂಸರಾಗಿ ಹೊರಹೊಮ್ಮಿದ್ದಾರೆ.

ಆದರೆ ಇತ್ತೀಚೆಗೆ ಈ ವಿವಿಯ ವರ್ಚಸ್ಸನ್ನು ಕುಂದಿಸುವ ಕೆಲಸಗಳು ಪ್ರಭುತ್ವದಿಂದಲೇ ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಿಸುತ್ತಿದೆ. ಸಾಂವಿಧಾನಿಕ ಮೌಲ್ಯಗಳು, ಪ್ರಶ್ನಿಸುವ ಹಕ್ಕನ್ನು ಧಮನಿಸುವ ಭಾಗವಾಗಿ ಜೆಎನ್‌ಯು ವಿದ್ಯಾರ್ಥಿ ಮತ್ತು ವಿದ್ವಾಂಸರ ಮೇಲೆ ಪ್ರಭುತ್ವ ಹಗೆ ಸಾಧಿಸುತ್ತಿದೆ.


ಇದನ್ನೂ ಓದಿ: ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...