Homeಕರ್ನಾಟಕ'ನೂರು 'ಮನ್ ಕಿ ಬಾತ್' ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ 'ಜನ್ ಕಿ ಬಾತ್' ಕೇಳುತ್ತಿರಾ?': ಮೋದಿಗೆ...

‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕೀ ಬಾತ್‌‘ ರೆಡಿಯೊ ಕಾರ್ಯಕ್ರಮ ಇಂದು (ರವಿವಾರ) ನೂರು ಸಂಚಿಕೆ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ಅಭಿನಂದನೆ ತಿಳಿಸಿ, ಈಗಲಾದರೂ ”ಜನ್‌ ಕಿ ಬಾತ್” ಕೇಳುತ್ತಿರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಸಾಮಾನ್ಯರ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

”ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?”

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?

ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?

ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?

ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?

ಇದನ್ನೂ ಓದಿ: ಮೋದಿ 100ನೇ ‘ಮನ್ ಕಿ ಬಾತ್‌’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?

ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?

ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?

ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?

ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ?

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ?

ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ? ಎಂದು #ಕರ್ನಾಟಕದ_ಜನ್‌ಕಿಬಾತ್ ಎಂದು ಹ್ಯಾಶ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...