Homeಕರ್ನಾಟಕ'ನೂರು 'ಮನ್ ಕಿ ಬಾತ್' ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ 'ಜನ್ ಕಿ ಬಾತ್' ಕೇಳುತ್ತಿರಾ?': ಮೋದಿಗೆ...

‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕೀ ಬಾತ್‌‘ ರೆಡಿಯೊ ಕಾರ್ಯಕ್ರಮ ಇಂದು (ರವಿವಾರ) ನೂರು ಸಂಚಿಕೆ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ಅಭಿನಂದನೆ ತಿಳಿಸಿ, ಈಗಲಾದರೂ ”ಜನ್‌ ಕಿ ಬಾತ್” ಕೇಳುತ್ತಿರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಸಾಮಾನ್ಯರ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

”ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?”

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?

ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?

ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?

ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?

ಇದನ್ನೂ ಓದಿ: ಮೋದಿ 100ನೇ ‘ಮನ್ ಕಿ ಬಾತ್‌’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?

ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?

ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?

ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?

ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ?

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ?

ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ? ಎಂದು #ಕರ್ನಾಟಕದ_ಜನ್‌ಕಿಬಾತ್ ಎಂದು ಹ್ಯಾಶ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...