ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್‘ ರೆಡಿಯೊ ಕಾರ್ಯಕ್ರಮ ಇಂದು (ರವಿವಾರ) ನೂರು ಸಂಚಿಕೆ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ಅಭಿನಂದನೆ ತಿಳಿಸಿ, ಈಗಲಾದರೂ ”ಜನ್ ಕಿ ಬಾತ್” ಕೇಳುತ್ತಿರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಸಾಮಾನ್ಯರ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಪ್ರಶ್ನೆ ಮಾಡಿದ್ದಾರೆ.
”ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?”
ಮಾನ್ಯ @narendramodi ಅವರೇ, ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್…— Siddaramaiah (@siddaramaiah) April 30, 2023
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?
ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?
ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?
ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?
ಇದನ್ನೂ ಓದಿ: ಮೋದಿ 100ನೇ ‘ಮನ್ ಕಿ ಬಾತ್’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ
ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?
ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?
ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?
ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?
ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?
ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ?
ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ?
ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ @BJP4Karnataka ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ @narendramodi? 10/10#ಕರ್ನಾಟಕದ_ಜನ್ಕಿಬಾತ್
— Siddaramaiah (@siddaramaiah) April 30, 2023
ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ? ಎಂದು #ಕರ್ನಾಟಕದ_ಜನ್ಕಿಬಾತ್ ಎಂದು ಹ್ಯಾಶ್ಟ್ಯಾಗ್ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.
Siddaramaiya jee ki jai ho 💐💐🙏