Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...