Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...