Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...