Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...