Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...