Homeಮುಖಪುಟಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಸೂರತ್‌ ಮಹಾನಗರ ಪಾಲಿಕೆಯ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

- Advertisement -
- Advertisement -

ಸೂರತ್ ಸ್ಥಳೀಯ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಗಮನಾರ್ಹ ಸಾಧನೆಯು ಗುಜರಾತ್‌ನಲ್ಲಿನ ಹೊಸ ರಾಜಕೀಯ ಆರಂಭದ ಸೂಚನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರಾಮಾಣಿಕತೆಗೆ ಸಿಕ್ಕ ಜಯವಾಗಿದ್ದು, ಆಯ್ಕೆಯಾಗಿರುವ ಪ್ರತಿಯೊಬ್ಬ ಆಪ್ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸೂರತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಪ್ 27 ಸ್ಥಾನಗಳಲ್ಲಿ ಜಯಗಳಿಸಿದೆ. ಗುಜರಾತ್‌ನ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 483 ಸ್ಥಾನಗಳಿಸಿ ಮಹತ್ವದ ಸಾಧನೆಗೈದಿದೆ. ಕಾಂಗ್ರೆಸ್ ಕೇವಲ 55 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡು ಮುಖಭಂಗ ಅನುಭವಿಸಿದೆ. ಆದರೆ ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಭರ್ಜರಿ ಆರಂಭ ಮಾಡಿದೆ. ಸೂರತ್‌ ಮಹಾನಗರ ಪಾಲಿಕೆಯ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಪಕ್ಷದ ವಿಜಯದ ಕುರಿತು ವಿಡಿಯೋ ಸಂದೇಶ ನೀಡಿರುವ ಅರವಿಂದ್ ಕೇಜ್ರಿವಾಲ್ “ಹೊಸ ರಾಜಕೀಯವನ್ನು ಪ್ರಾರಂಭಿಸಿದ ಗುಜರಾತ್ ಜನರಿಗೆ ಅಭಿನಂದನೆಗಳು. ಆಮ್ ಆದ್ಮಿ ಪಕ್ಷದ ಗುಜರಾತ್ ಘಟಕದ ಎಲ್ಲ ಕಾರ್ಯಕರ್ತರ ಶ್ರಮಕ್ಕೆ ನಮಸ್ಕಾರ ಮತ್ತು ಎಲ್ಲರಿಗೂ ಅಭಿನಂದನೆಗಳು. ಭವಿಷ್ಯದಲ್ಲಿ ಉತ್ತಮ ರಾಜಕೀಯವನ್ನು ಸ್ವಾಗತಿಸಲು ಈಗ ಇಡೀ ಗುಜರಾತ್ ಸಿದ್ಧವಾಗಿದೆ ಎಂದು ಸೂರತ್‌ನ ಮತದಾರರು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

“125 ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಜನತೆ ಆಪ್ ಕೈ ಹಿಡಿದಿದ್ದಾರೆ. ಆಪ್‌ನಿಂದ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗುಜರಾತ್‌ನ ಜನರಿಗೆ ಅಭಿನಂದನೆ ತಿಳಿಸಲು ಫೆಬ್ರವರಿ 26 ರಂದು ಸೂರತ್‌ಗೆ ಭೇಟಿ ನೀಡಲಿದ್ದೇನೆ” ಎಂದು ತಿಳಿಸಿದ್ದಾರೆ.

ಆಪ್‌ನ ಜಯವು ಗುಜರಾತ್‌ನಲ್ಲಿ ಹೊಸ ರಾಜಕೀಯದ ಸೂಚನೆಯಾಗಿದೆ. ಪ್ರಾಮಾಣಿಕ ರಾಜಕಾರಣ, ಉತ್ತಮ ಶಾಲೆಗಳಿಗಾಗಿ ರಾಜಕಾರಣ, ಕಡಿಮೆ ದರದಲ್ಲಿ 24 ಗಂಟೆಗಳ ವಿದ್ಯುತ್ ನೀಡುವುದು ನಮ್ಮ ಆದ್ಯತೆ. ಜನರ ಸಹಭಾಗಿತ್ವದೊಂದಿಗೆ ಗುಜರಾತ್‌ ಅನ್ನು ಅಭಿವೃದ್ದಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....