Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....