Homeಮುಖಪುಟಪರಸ್ಪರ ಒಪ್ಪಿಗೆಯಿಂದ ಪಂಜಾಬ್‌ನಲ್ಲಿ ಪ್ರತ್ಯೇಕ ಸ್ಪರ್ಧೆಗೆ ಕಾಂಗ್ರೆಸ್-ಆಫ್ ನಿರ್ಧಾರ: ಅರವಿಂದ್ ಕೇಜ್ರಿವಾಲ್

ಪರಸ್ಪರ ಒಪ್ಪಿಗೆಯಿಂದ ಪಂಜಾಬ್‌ನಲ್ಲಿ ಪ್ರತ್ಯೇಕ ಸ್ಪರ್ಧೆಗೆ ಕಾಂಗ್ರೆಸ್-ಆಫ್ ನಿರ್ಧಾರ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನ ಲೋಕಸಭೆ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ‘ಪರಸ್ಪರ ಒಪ್ಪಿಗೆ’ ನೀಡಿವೆ; ಈ ವಿಷಯದಲ್ಲಿ ಎರಡು ಪಕ್ಷಗಳ ನಡುವೆ ಯಾವುದೇ ಗೊಂದಲ ಇಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಇಂದು ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಅಭಿಷೇಕ್ ಸಿಂಘ್ವಿ ಅವರ ಮನೆಗೆ ಊಟಕ್ಕೆ ಭೇಟಿ ನೀಡಿದ್ದರು. ಪಂಜಾಬ್‌ನಲ್ಲಿ ಎಎಪಿ ಮತ್ತು ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಪರಸ್ಪರ ಒಪ್ಪಿಗೆ ಸೂಚಿಸಿವೆ, ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ’ ಎಂದರು.

ಪಂಜಾಬ್‌ನಲ್ಲಿ ಪ್ರತಿಸ್ಪರ್ಧಿಗಳಾಗಿರುವ ಕಾಂಗ್ರೆಸ್ ಮತ್ತು ಆಪ್ ಇಂಡಿಯಾ ಬಣದಲ್ಲಿ ಮಿತ್ರಪಕ್ಷಗಳು. ‘ದೆಹಲಿಯಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲು ಎಎಪಿ ಕಾಂಗ್ರೆಸ್ ಜೊತೆ ಮಾತುಕತೆ ನಡೆಸುತ್ತಿದೆ’ ಎಂದು ಕೇಜ್ರಿವಾಲ್ ಹೇಳಿದರು. ‘ನಾವು ದೆಹಲಿಯಲ್ಲಿ ಮೈತ್ರಿ ಕುರಿತು ಕಾಂಗ್ರೆಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಾವು ಸೀಟು ಹಂಚಿಕೆಯ ಬಗ್ಗೆ ಚರ್ಚಿಸುತ್ತಿದ್ದೇವೆ. ಯಾವುದೇ ಮೈತ್ರಿ ಇಲ್ಲದಿದ್ದರೆ (ಕಾಂಗ್ರೆಸ್ ಮತ್ತು ಎಎಪಿ ನಡುವೆ) ಬಿಜೆಪಿಗೆ ಸುಲಭವಾಗುತ್ತದೆ’ ಎಂದು ಅವರು ಹೇಳಿದರು.

2019ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯ ಎಲ್ಲ ಏಳು ಸಂಸದೀಯ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 2014ರಲ್ಲಿ ಅವರು ಇದೇ ಸಾಧನೆ ಮಾಡಿದ್ದರು. ಕೇಜ್ರಿವಾಲ್ ಅವರ ಹೇಳಿಕೆಯು ಇಂಡಿಯಾ ಮಿತ್ರಪಕ್ಷಗಳು ಬಿಜೆಪಿಯನ್ನು ಎದುರಿಸುವ ಮೂಲಕ, ತಮ್ಮ ಓಟ್‌ ಬ್ಯಾಂಕ್ ಹಿಡಿದಿಟ್ಟುಕೊಳ್ಳುವ ತಂತ್ರ ಎಂದು ಸೂಚಿಸುತ್ತದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪಂಜಾಬ್‌ನ ಎಲ್ಲ 13 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಆಪ್ ನಿರ್ಧರಿಸಿದೆ ಎಂದು ಈ ಹಿಂದೆ ಘೋಷಿಸಿದ್ದರು. ಪಂಜಾಬ್‌ನ ಕಾಂಗ್ರೆಸ್‌ನ ಉನ್ನತ ನಾಯಕರಲ್ಲಿ ಒಬ್ಬರಾದ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ ಅವರು ಮುಖ್ಯಮಂತ್ರಿಗೆ ‘ಧನ್ಯವಾದ’ಗಳನ್ನು ಸಲ್ಲಿಸಿದ್ದರು; ಕಾಂಗ್ರೆಸ್ ಬಯಸಿದ್ದು ಇದನ್ನೇ’ ಎಂದು ಹೇಳಿದ್ದಾರೆ.

‘ಪಂಜಾಬ್ ಮತ್ತು ಇತರ ರಾಜ್ಯಗಳ ನಡುವೆ ವ್ಯತ್ಯಾಸವಿದೆ. ಇಲ್ಲಿ ಅವರು (ಎಎಪಿ) ಸರ್ಕಾರದಲ್ಲಿದ್ದಾರೆ ಮತ್ತು ನಾವು ಪ್ರಮುಖ ವಿರೋಧ ಪಕ್ಷವಾಗಿದ್ದೇವೆ. ನಾವಿಬ್ಬರೂ ಹೇಗೆ ಒಟ್ಟಿಗೆ ಸೇರಬಹುದು? ನಾವು ಒಗ್ಗೂಡಿದರೆ, ಆಡಳಿತ ವಿರೋಧಿ ಮತಗಳು ಬಿಜೆಪಿ ಅಥವಾ ಅಕಾಲಿದಳಕ್ಕೆ ಬದಲಾಗಲಿವೆ. ನಾವು ನಮ್ಮ ಸ್ಥಾನವನ್ನು ಹೇಗೆ ಬಿಟ್ಟುಕೊಡಬಹುದು? ಕಾಂಗ್ರೆಸ್ ಪುನರಾಗಮನದ ದಾರಿಯಲ್ಲಿದೆ. ಈ ಮೂಲಕ ನಾವು ನಮ್ಮ ಅಸ್ತಿತ್ವವನ್ನು ಮುಂದುವರಿಸಿ, ನಮ್ಮ ವೋಟ್ ಬ್ಯಾಂಕ್ ಅನ್ನು ಉಳಿಸಿಕೊಳ್ಳಬೇಕು; ಅದನ್ನು ಬೆಳೆಸಿಕೊಳ್ಳಬೇಕು. ಇದು ಇಬ್ಬರಿಗೂ (ಕಾಂಗ್ರೆಸ್ ಮತ್ತು ಎಎಪಿ) ಹೆಚ್ಚು ಉತ್ತಮವಾಗಿದೆ’ ಎಂದು ಅವರು ಹೇಳಿದರು.

ಎಎಪಿ ಮತ್ತು ಕಾಂಗ್ರೆಸ್ ನಡುವಿನ ತಿಳುವಳಿಕೆಯು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅದರ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಮೈತ್ರಿಯನ್ನು ‘ಅವಕಾಶವಾದಿ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ; ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಅಕ್ರಮ; ಉತ್ತರ ಪ್ರದೇಶದಾದ್ಯಂತ 122 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...