Homeಮುಖಪುಟಪರಸ್ಪರ ಒಪ್ಪಿಗೆಯಿಂದ ಪಂಜಾಬ್‌ನಲ್ಲಿ ಪ್ರತ್ಯೇಕ ಸ್ಪರ್ಧೆಗೆ ಕಾಂಗ್ರೆಸ್-ಆಫ್ ನಿರ್ಧಾರ: ಅರವಿಂದ್ ಕೇಜ್ರಿವಾಲ್

ಪರಸ್ಪರ ಒಪ್ಪಿಗೆಯಿಂದ ಪಂಜಾಬ್‌ನಲ್ಲಿ ಪ್ರತ್ಯೇಕ ಸ್ಪರ್ಧೆಗೆ ಕಾಂಗ್ರೆಸ್-ಆಫ್ ನಿರ್ಧಾರ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನ ಲೋಕಸಭೆ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ‘ಪರಸ್ಪರ ಒಪ್ಪಿಗೆ’ ನೀಡಿವೆ; ಈ ವಿಷಯದಲ್ಲಿ ಎರಡು ಪಕ್ಷಗಳ ನಡುವೆ ಯಾವುದೇ ಗೊಂದಲ ಇಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಇಂದು ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಅಭಿಷೇಕ್ ಸಿಂಘ್ವಿ ಅವರ ಮನೆಗೆ ಊಟಕ್ಕೆ ಭೇಟಿ ನೀಡಿದ್ದರು. ಪಂಜಾಬ್‌ನಲ್ಲಿ ಎಎಪಿ ಮತ್ತು ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಪರಸ್ಪರ ಒಪ್ಪಿಗೆ ಸೂಚಿಸಿವೆ, ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ’ ಎಂದರು.

ಪಂಜಾಬ್‌ನಲ್ಲಿ ಪ್ರತಿಸ್ಪರ್ಧಿಗಳಾಗಿರುವ ಕಾಂಗ್ರೆಸ್ ಮತ್ತು ಆಪ್ ಇಂಡಿಯಾ ಬಣದಲ್ಲಿ ಮಿತ್ರಪಕ್ಷಗಳು. ‘ದೆಹಲಿಯಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲು ಎಎಪಿ ಕಾಂಗ್ರೆಸ್ ಜೊತೆ ಮಾತುಕತೆ ನಡೆಸುತ್ತಿದೆ’ ಎಂದು ಕೇಜ್ರಿವಾಲ್ ಹೇಳಿದರು. ‘ನಾವು ದೆಹಲಿಯಲ್ಲಿ ಮೈತ್ರಿ ಕುರಿತು ಕಾಂಗ್ರೆಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಾವು ಸೀಟು ಹಂಚಿಕೆಯ ಬಗ್ಗೆ ಚರ್ಚಿಸುತ್ತಿದ್ದೇವೆ. ಯಾವುದೇ ಮೈತ್ರಿ ಇಲ್ಲದಿದ್ದರೆ (ಕಾಂಗ್ರೆಸ್ ಮತ್ತು ಎಎಪಿ ನಡುವೆ) ಬಿಜೆಪಿಗೆ ಸುಲಭವಾಗುತ್ತದೆ’ ಎಂದು ಅವರು ಹೇಳಿದರು.

2019ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯ ಎಲ್ಲ ಏಳು ಸಂಸದೀಯ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 2014ರಲ್ಲಿ ಅವರು ಇದೇ ಸಾಧನೆ ಮಾಡಿದ್ದರು. ಕೇಜ್ರಿವಾಲ್ ಅವರ ಹೇಳಿಕೆಯು ಇಂಡಿಯಾ ಮಿತ್ರಪಕ್ಷಗಳು ಬಿಜೆಪಿಯನ್ನು ಎದುರಿಸುವ ಮೂಲಕ, ತಮ್ಮ ಓಟ್‌ ಬ್ಯಾಂಕ್ ಹಿಡಿದಿಟ್ಟುಕೊಳ್ಳುವ ತಂತ್ರ ಎಂದು ಸೂಚಿಸುತ್ತದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪಂಜಾಬ್‌ನ ಎಲ್ಲ 13 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಆಪ್ ನಿರ್ಧರಿಸಿದೆ ಎಂದು ಈ ಹಿಂದೆ ಘೋಷಿಸಿದ್ದರು. ಪಂಜಾಬ್‌ನ ಕಾಂಗ್ರೆಸ್‌ನ ಉನ್ನತ ನಾಯಕರಲ್ಲಿ ಒಬ್ಬರಾದ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ ಅವರು ಮುಖ್ಯಮಂತ್ರಿಗೆ ‘ಧನ್ಯವಾದ’ಗಳನ್ನು ಸಲ್ಲಿಸಿದ್ದರು; ಕಾಂಗ್ರೆಸ್ ಬಯಸಿದ್ದು ಇದನ್ನೇ’ ಎಂದು ಹೇಳಿದ್ದಾರೆ.

‘ಪಂಜಾಬ್ ಮತ್ತು ಇತರ ರಾಜ್ಯಗಳ ನಡುವೆ ವ್ಯತ್ಯಾಸವಿದೆ. ಇಲ್ಲಿ ಅವರು (ಎಎಪಿ) ಸರ್ಕಾರದಲ್ಲಿದ್ದಾರೆ ಮತ್ತು ನಾವು ಪ್ರಮುಖ ವಿರೋಧ ಪಕ್ಷವಾಗಿದ್ದೇವೆ. ನಾವಿಬ್ಬರೂ ಹೇಗೆ ಒಟ್ಟಿಗೆ ಸೇರಬಹುದು? ನಾವು ಒಗ್ಗೂಡಿದರೆ, ಆಡಳಿತ ವಿರೋಧಿ ಮತಗಳು ಬಿಜೆಪಿ ಅಥವಾ ಅಕಾಲಿದಳಕ್ಕೆ ಬದಲಾಗಲಿವೆ. ನಾವು ನಮ್ಮ ಸ್ಥಾನವನ್ನು ಹೇಗೆ ಬಿಟ್ಟುಕೊಡಬಹುದು? ಕಾಂಗ್ರೆಸ್ ಪುನರಾಗಮನದ ದಾರಿಯಲ್ಲಿದೆ. ಈ ಮೂಲಕ ನಾವು ನಮ್ಮ ಅಸ್ತಿತ್ವವನ್ನು ಮುಂದುವರಿಸಿ, ನಮ್ಮ ವೋಟ್ ಬ್ಯಾಂಕ್ ಅನ್ನು ಉಳಿಸಿಕೊಳ್ಳಬೇಕು; ಅದನ್ನು ಬೆಳೆಸಿಕೊಳ್ಳಬೇಕು. ಇದು ಇಬ್ಬರಿಗೂ (ಕಾಂಗ್ರೆಸ್ ಮತ್ತು ಎಎಪಿ) ಹೆಚ್ಚು ಉತ್ತಮವಾಗಿದೆ’ ಎಂದು ಅವರು ಹೇಳಿದರು.

ಎಎಪಿ ಮತ್ತು ಕಾಂಗ್ರೆಸ್ ನಡುವಿನ ತಿಳುವಳಿಕೆಯು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅದರ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಮೈತ್ರಿಯನ್ನು ‘ಅವಕಾಶವಾದಿ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ; ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಅಕ್ರಮ; ಉತ್ತರ ಪ್ರದೇಶದಾದ್ಯಂತ 122 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...