Homeಕರ್ನಾಟಕಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

ಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

- Advertisement -
- Advertisement -

ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ ಎಂದು ಕರ್ನಾಟಕ ಕಾಂಗ್ರೆಸ್ ಬುಧವಾರ ಆಕ್ರೋಶ ವ್ಯಕ್ತಪಡಿಸಿದೆ. ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ? ಎಂದು ಕಾಂಗ್ರೆಸ್ ಹೇಳಿದೆ.

ಇಂದು ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಿರುವ ಕಾಂಗ್ರೆಸ್, “ಡಿ.ವಿ. ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ. ರಾಜ್ಯದಲ್ಲಿ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ?” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

“ಫಾರ್ಮಾಸೂಟಿಕಲ್ ಮಂತ್ರಿಯಾಗಿ ರಾಜ್ಯಕ್ಕೆ ರೆಮಿಡಿಸಿವಿರ್, ಲಸಿಕೆ ಹಾಗೂ ಅಂಪೊಟರಿಸನ್ ಹಂಚಿಕೆಯಲ್ಲಿ ನ್ಯಾಯ ಸಲ್ಲಿಸದ ಸದಾನಂದ ಗೌಡರು ರಸಗೊಬ್ಬರ ಸಚಿವರಾಗಿಯೂ ನಮ್ಮ ರೈತರಿಗೆ ಗೊಬ್ಬರ ಒದಗಿಸಲಾಗಲಿಲ್ಲ” ಎಂದು ಕಾಂಗ್ರೆಸ್‌ ಹೇಳಿದೆ.

“ಸದಾನಂದ ಗೌಡ ಅವರೇ, ಎಲ್ಲವೂ ಪಿಎಂ ಕಚೇರಿಯಲ್ಲಿ ನಿರ್ವಹಣೆಯಾಗುತ್ತಿದೆ, ನಿಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವ ಸತ್ಯವನ್ನಾದರೂ ಹೇಳಿಬಿಡಿ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

“ಬಿಜೆಪಿಯ ಆಡಳಿತದಲ್ಲಿ ರಾಜ್ಯವು ‘ನತದೃಷ್ಟ ಕರ್ನಾಟಕ’ವಾಗಿದೆ. ಕರೋನಾ ಸೋಂಕಿತರಿಗೆ ಆಕ್ಸಿಜನ್ ಕೊಡಲಿಲ್ಲ, ಬೆಡ್ ಒದಗಿಸಲಿಲ್ಲ, ರೆಮಿಡಿಸಿವಿರ್ ನೀಡಲಿಲ್ಲ, ಅಂಪೊಟರಿಸನ್ ಇಲ್ಲ, ಚಿಕಿತ್ಸೆ ಇಲ್ಲವೇ ಇಲ್ಲ, ಸಮರ್ಪಕ ಆರ್ಥಿಕ ಪ್ಯಾಕೇಜ್ ಇಲ್ಲ ಈಗ ಮುಂಗಾರಿನಲ್ಲಿ ರೈತರಿಗೆ ಗೊಬ್ಬರ ಕೊಡುತ್ತಿಲ್ಲ, ಬಿತ್ತನೆ ಬೀಜ ಇಲ್ಲವೇ ಇಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...