Homeಕರ್ನಾಟಕಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

ಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

- Advertisement -
- Advertisement -

ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ ಎಂದು ಕರ್ನಾಟಕ ಕಾಂಗ್ರೆಸ್ ಬುಧವಾರ ಆಕ್ರೋಶ ವ್ಯಕ್ತಪಡಿಸಿದೆ. ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ? ಎಂದು ಕಾಂಗ್ರೆಸ್ ಹೇಳಿದೆ.

ಇಂದು ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಿರುವ ಕಾಂಗ್ರೆಸ್, “ಡಿ.ವಿ. ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ. ರಾಜ್ಯದಲ್ಲಿ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ?” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

“ಫಾರ್ಮಾಸೂಟಿಕಲ್ ಮಂತ್ರಿಯಾಗಿ ರಾಜ್ಯಕ್ಕೆ ರೆಮಿಡಿಸಿವಿರ್, ಲಸಿಕೆ ಹಾಗೂ ಅಂಪೊಟರಿಸನ್ ಹಂಚಿಕೆಯಲ್ಲಿ ನ್ಯಾಯ ಸಲ್ಲಿಸದ ಸದಾನಂದ ಗೌಡರು ರಸಗೊಬ್ಬರ ಸಚಿವರಾಗಿಯೂ ನಮ್ಮ ರೈತರಿಗೆ ಗೊಬ್ಬರ ಒದಗಿಸಲಾಗಲಿಲ್ಲ” ಎಂದು ಕಾಂಗ್ರೆಸ್‌ ಹೇಳಿದೆ.

“ಸದಾನಂದ ಗೌಡ ಅವರೇ, ಎಲ್ಲವೂ ಪಿಎಂ ಕಚೇರಿಯಲ್ಲಿ ನಿರ್ವಹಣೆಯಾಗುತ್ತಿದೆ, ನಿಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವ ಸತ್ಯವನ್ನಾದರೂ ಹೇಳಿಬಿಡಿ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

“ಬಿಜೆಪಿಯ ಆಡಳಿತದಲ್ಲಿ ರಾಜ್ಯವು ‘ನತದೃಷ್ಟ ಕರ್ನಾಟಕ’ವಾಗಿದೆ. ಕರೋನಾ ಸೋಂಕಿತರಿಗೆ ಆಕ್ಸಿಜನ್ ಕೊಡಲಿಲ್ಲ, ಬೆಡ್ ಒದಗಿಸಲಿಲ್ಲ, ರೆಮಿಡಿಸಿವಿರ್ ನೀಡಲಿಲ್ಲ, ಅಂಪೊಟರಿಸನ್ ಇಲ್ಲ, ಚಿಕಿತ್ಸೆ ಇಲ್ಲವೇ ಇಲ್ಲ, ಸಮರ್ಪಕ ಆರ್ಥಿಕ ಪ್ಯಾಕೇಜ್ ಇಲ್ಲ ಈಗ ಮುಂಗಾರಿನಲ್ಲಿ ರೈತರಿಗೆ ಗೊಬ್ಬರ ಕೊಡುತ್ತಿಲ್ಲ, ಬಿತ್ತನೆ ಬೀಜ ಇಲ್ಲವೇ ಇಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...