Homeಮುಖಪುಟ"ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ": ಕಾಂಗ್ರೆಸ್ ಆರೋಪ

“ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

- Advertisement -
- Advertisement -

ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೊಡೋ ನ್ಯಾಯ್ ಯಾತ್ರೆಯ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಂವಿಧಾನ ನೀಡಿರುವ ಎಲ್ಲಾ ಹಕ್ಕು ಮತ್ತು ನ್ಯಾಯವನ್ನು ತುಳಿದು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದೆ.

ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ಕೆಡವಲು ಪ್ರಯತ್ನಿಸಿದೆ. ಬಿಜೆಪಿ ಜನರ ಧ್ವನಿಯನ್ನು ಅಡಗಿಸಲು ಬಯಸಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಯಾತ್ರೆಯ ಮೇಲೆ ಬಿಜೆಪಿ ದಾಳಿ ಮಾಡಿದೆ ಎನ್ನಲಾದ ವಿಡಿಯೋವನ್ನು ಹಂಚಿಕೊಂಡಿದ್ದು, “ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ‘ಅತಿ ಭ್ರಷ್ಟ’ ಸಿಎಂ ಹಿಮಂತ ಎಷ್ಟು ಹೆದರುತ್ತಾರೆ ಎಂಬುದಕ್ಕೆ ಹೆಚ್ಚಿನ ಪುರಾವೆ ಬೇಕೇ? ಅವರ ಗೂಂಡಾಗಳು ನಮ್ಮ ಕಾಂಗ್ರೆಸ್ ಪೋಸ್ಟರ್‌ಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿರುವುದನ್ನು ನೋಡಿ!” ಎಂದು ಬರೆದುಕೊಂಡಿದ್ದಾರೆ.

“ಯಾತ್ರೆ ಮಾಡುತ್ತಿರುವ ದೊಡ್ಡ ಪ್ರಭಾವದಿಂದಾಗಿ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಹಾಗಾಗಿ ಅವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ” ಎಂದು ವೇಣುಗೋಪಾಲ್ ತನ್ನ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರತ್ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಪಾಲ್ಗೊಂಡಿರುವ ಯುವ ಕಾಂಗ್ರೆಸ್‌ನ ವಾಹನಗಳನ್ನು ಜಖಂಗೊಳಿಸಿ, ಪೋಸ್ಟರ್, ಬ್ಯಾನರ್‌ಗಳನ್ನು ಹರಿದು ಹಾಕಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಯುವಮೋರ್ಚಾ ಈ ಕೃತ್ಯವೆಸಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಇಂದಿಗೆ ಮೂರನೇ ದಿನ ಪೂರೈಸಿದೆ. ಮುಂದೆ ಅರುಣಾಚಲ ಪ್ರದೇಶವನ್ನು ಪ್ರವೇಶಿಸಲಿದೆ. ಅದಕ್ಕೂ ಮುನ್ನ ಅಸ್ಸಾಂನ ಉತ್ತರ ಲಖಿಂಪುರ ಸೇರಿದಂತೆ ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಯಾತ್ರೆ ಹಾದು ಹೋಗಲಿದೆ.

ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...