Homeಮುಖಪುಟ"ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ": ಕಾಂಗ್ರೆಸ್ ಆರೋಪ

“ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

- Advertisement -
- Advertisement -

ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೊಡೋ ನ್ಯಾಯ್ ಯಾತ್ರೆಯ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಂವಿಧಾನ ನೀಡಿರುವ ಎಲ್ಲಾ ಹಕ್ಕು ಮತ್ತು ನ್ಯಾಯವನ್ನು ತುಳಿದು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದೆ.

ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ಕೆಡವಲು ಪ್ರಯತ್ನಿಸಿದೆ. ಬಿಜೆಪಿ ಜನರ ಧ್ವನಿಯನ್ನು ಅಡಗಿಸಲು ಬಯಸಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಯಾತ್ರೆಯ ಮೇಲೆ ಬಿಜೆಪಿ ದಾಳಿ ಮಾಡಿದೆ ಎನ್ನಲಾದ ವಿಡಿಯೋವನ್ನು ಹಂಚಿಕೊಂಡಿದ್ದು, “ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ‘ಅತಿ ಭ್ರಷ್ಟ’ ಸಿಎಂ ಹಿಮಂತ ಎಷ್ಟು ಹೆದರುತ್ತಾರೆ ಎಂಬುದಕ್ಕೆ ಹೆಚ್ಚಿನ ಪುರಾವೆ ಬೇಕೇ? ಅವರ ಗೂಂಡಾಗಳು ನಮ್ಮ ಕಾಂಗ್ರೆಸ್ ಪೋಸ್ಟರ್‌ಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿರುವುದನ್ನು ನೋಡಿ!” ಎಂದು ಬರೆದುಕೊಂಡಿದ್ದಾರೆ.

“ಯಾತ್ರೆ ಮಾಡುತ್ತಿರುವ ದೊಡ್ಡ ಪ್ರಭಾವದಿಂದಾಗಿ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಹಾಗಾಗಿ ಅವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ” ಎಂದು ವೇಣುಗೋಪಾಲ್ ತನ್ನ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರತ್ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಪಾಲ್ಗೊಂಡಿರುವ ಯುವ ಕಾಂಗ್ರೆಸ್‌ನ ವಾಹನಗಳನ್ನು ಜಖಂಗೊಳಿಸಿ, ಪೋಸ್ಟರ್, ಬ್ಯಾನರ್‌ಗಳನ್ನು ಹರಿದು ಹಾಕಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಯುವಮೋರ್ಚಾ ಈ ಕೃತ್ಯವೆಸಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಇಂದಿಗೆ ಮೂರನೇ ದಿನ ಪೂರೈಸಿದೆ. ಮುಂದೆ ಅರುಣಾಚಲ ಪ್ರದೇಶವನ್ನು ಪ್ರವೇಶಿಸಲಿದೆ. ಅದಕ್ಕೂ ಮುನ್ನ ಅಸ್ಸಾಂನ ಉತ್ತರ ಲಖಿಂಪುರ ಸೇರಿದಂತೆ ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಯಾತ್ರೆ ಹಾದು ಹೋಗಲಿದೆ.

ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...