ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೊಡೋ ನ್ಯಾಯ್ ಯಾತ್ರೆಯ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಂವಿಧಾನ ನೀಡಿರುವ ಎಲ್ಲಾ ಹಕ್ಕು ಮತ್ತು ನ್ಯಾಯವನ್ನು ತುಳಿದು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದೆ.
ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
We strongly condemn the shameful attack on the #BharatJodoNyayYatra vehicles and tearing of Congress party's banners and posters by BJP goons in Lakhimpur, Assam.
In the last 10 years, BJP has attempted to trample and demolish every right and justice guaranteed by the…
— Mallikarjun Kharge (@kharge) January 20, 2024
“ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ಕೆಡವಲು ಪ್ರಯತ್ನಿಸಿದೆ. ಬಿಜೆಪಿ ಜನರ ಧ್ವನಿಯನ್ನು ಅಡಗಿಸಲು ಬಯಸಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಯಾತ್ರೆಯ ಮೇಲೆ ಬಿಜೆಪಿ ದಾಳಿ ಮಾಡಿದೆ ಎನ್ನಲಾದ ವಿಡಿಯೋವನ್ನು ಹಂಚಿಕೊಂಡಿದ್ದು, “ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ‘ಅತಿ ಭ್ರಷ್ಟ’ ಸಿಎಂ ಹಿಮಂತ ಎಷ್ಟು ಹೆದರುತ್ತಾರೆ ಎಂಬುದಕ್ಕೆ ಹೆಚ್ಚಿನ ಪುರಾವೆ ಬೇಕೇ? ಅವರ ಗೂಂಡಾಗಳು ನಮ್ಮ ಕಾಂಗ್ರೆಸ್ ಪೋಸ್ಟರ್ಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿರುವುದನ್ನು ನೋಡಿ!” ಎಂದು ಬರೆದುಕೊಂಡಿದ್ದಾರೆ.
Want more evidence of how scared #MostCorruptCMHimanta is of the Bharat Jodo Nyay Yatra? Look at his goons vandalise our Congress posters and vehicles!
He’s so rattled because of the huge impact the Yatra is making, he will stoop to any level. pic.twitter.com/yVVQI9BdaL
— K C Venugopal (@kcvenugopalmp) January 20, 2024
“ಯಾತ್ರೆ ಮಾಡುತ್ತಿರುವ ದೊಡ್ಡ ಪ್ರಭಾವದಿಂದಾಗಿ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಹಾಗಾಗಿ ಅವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ” ಎಂದು ವೇಣುಗೋಪಾಲ್ ತನ್ನ ಹೇಳಿದ್ದಾರೆ.
ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡಿರುವ ಯುವ ಕಾಂಗ್ರೆಸ್ನ ವಾಹನಗಳನ್ನು ಜಖಂಗೊಳಿಸಿ, ಪೋಸ್ಟರ್, ಬ್ಯಾನರ್ಗಳನ್ನು ಹರಿದು ಹಾಕಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಯುವಮೋರ್ಚಾ ಈ ಕೃತ್ಯವೆಸಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಇಂದಿಗೆ ಮೂರನೇ ದಿನ ಪೂರೈಸಿದೆ. ಮುಂದೆ ಅರುಣಾಚಲ ಪ್ರದೇಶವನ್ನು ಪ್ರವೇಶಿಸಲಿದೆ. ಅದಕ್ಕೂ ಮುನ್ನ ಅಸ್ಸಾಂನ ಉತ್ತರ ಲಖಿಂಪುರ ಸೇರಿದಂತೆ ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಯಾತ್ರೆ ಹಾದು ಹೋಗಲಿದೆ.
ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ