Homeಮುಖಪುಟ"ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ": ಕಾಂಗ್ರೆಸ್ ಆರೋಪ

“ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

- Advertisement -
- Advertisement -

ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೊಡೋ ನ್ಯಾಯ್ ಯಾತ್ರೆಯ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಂವಿಧಾನ ನೀಡಿರುವ ಎಲ್ಲಾ ಹಕ್ಕು ಮತ್ತು ನ್ಯಾಯವನ್ನು ತುಳಿದು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದೆ.

ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ಕೆಡವಲು ಪ್ರಯತ್ನಿಸಿದೆ. ಬಿಜೆಪಿ ಜನರ ಧ್ವನಿಯನ್ನು ಅಡಗಿಸಲು ಬಯಸಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಯಾತ್ರೆಯ ಮೇಲೆ ಬಿಜೆಪಿ ದಾಳಿ ಮಾಡಿದೆ ಎನ್ನಲಾದ ವಿಡಿಯೋವನ್ನು ಹಂಚಿಕೊಂಡಿದ್ದು, “ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ‘ಅತಿ ಭ್ರಷ್ಟ’ ಸಿಎಂ ಹಿಮಂತ ಎಷ್ಟು ಹೆದರುತ್ತಾರೆ ಎಂಬುದಕ್ಕೆ ಹೆಚ್ಚಿನ ಪುರಾವೆ ಬೇಕೇ? ಅವರ ಗೂಂಡಾಗಳು ನಮ್ಮ ಕಾಂಗ್ರೆಸ್ ಪೋಸ್ಟರ್‌ಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿರುವುದನ್ನು ನೋಡಿ!” ಎಂದು ಬರೆದುಕೊಂಡಿದ್ದಾರೆ.

“ಯಾತ್ರೆ ಮಾಡುತ್ತಿರುವ ದೊಡ್ಡ ಪ್ರಭಾವದಿಂದಾಗಿ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಹಾಗಾಗಿ ಅವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ” ಎಂದು ವೇಣುಗೋಪಾಲ್ ತನ್ನ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರತ್ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಪಾಲ್ಗೊಂಡಿರುವ ಯುವ ಕಾಂಗ್ರೆಸ್‌ನ ವಾಹನಗಳನ್ನು ಜಖಂಗೊಳಿಸಿ, ಪೋಸ್ಟರ್, ಬ್ಯಾನರ್‌ಗಳನ್ನು ಹರಿದು ಹಾಕಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಯುವಮೋರ್ಚಾ ಈ ಕೃತ್ಯವೆಸಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಇಂದಿಗೆ ಮೂರನೇ ದಿನ ಪೂರೈಸಿದೆ. ಮುಂದೆ ಅರುಣಾಚಲ ಪ್ರದೇಶವನ್ನು ಪ್ರವೇಶಿಸಲಿದೆ. ಅದಕ್ಕೂ ಮುನ್ನ ಅಸ್ಸಾಂನ ಉತ್ತರ ಲಖಿಂಪುರ ಸೇರಿದಂತೆ ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಯಾತ್ರೆ ಹಾದು ಹೋಗಲಿದೆ.

ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...