Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...