Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...