Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...

ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು...

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ 'ಗಂಭೀರ ದುರ್ನಡತೆ' ಆರೋಪ ಮಾಡಿದೆ...

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...