Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...