Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...