Homeಕರ್ನಾಟಕಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಇಂದು (ಬುಧವಾರ) ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಕೊರೊನಾ ಕಾರಣದಿಂದ ಜಾಥಾ ನಡೆಸಲು ಅನುಮತಿ ಇಲ್ಲದ ಕಾರಣ ಮತ್ತು ಪೊಲೀಸರ ಅನುಮತಿ ಪಡೆಯದ ಕಾರಣಕ್ಕೆ ರ್‍ಯಾಲಿ ನಡೆಸಿದ ಹಲವು ನಾಯಕರನ್ನು ಬಂಧಿಸಲಾಯಿತು.

ವಿಶ್ವದಲ್ಲಿಯೇ ಅಧಿಕ ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ಮೌನ ದೇಶದ ಜನರ ಬದುಕನ್ನು ಮುಗಿಸುವ ಸಂಚಿನಂತೆ ಭಾಸವಾಗುತ್ತದೆ. ಜನಸಾಮಾನ್ಯರ ಬದುಕಿಗೆ, ಕುಸಿದ ಆರ್ಥಿಕತೆಯ ಚೇತರಿಕೆಗೆ ಈ ಬೆಲೆ ಏರಿಕೆಯು ಬೀರುವ ದುಷ್ಪರಿಣಾಮದ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡದೆ ಧೂರ್ತತನ ಸರ್ಕಾರ ತೋರಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಾಲಿಂಗರೆಡ್ಡಿ ಮತ್ತು ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ, ಘೋಷಣೆಗಳನ್ನು ಕೂಗಿ ಸೈಕಲ್ ಜಾಥಾ ನಡೆಸಲಾಯಿತು.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ’ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ಈ ಹೋರಾಟ ನಿರಂತರ’ ಎಂದರು.

’ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್‌.ಪಾಟೀಲ್ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾ ನಡೆಸಲಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...