Homeಮುಖಪುಟಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10 ಮಂದಿ...

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10 ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು, ಗಲಾಟೆ ಸೃಷ್ಟಿಸಿ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಶುಭಂ ಸಿಂಗ್ ಅವರ ಮೇಲೂ ಅಪರಿಚಿತರು ಹಲ್ಲೆ ನಡೆಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಉತ್ತರ ಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಭಯಭೀತರಾಗಿದ್ದಾರೆ. ಕಣ್ಣ ಮುಂದೆ ಕಾಣುತ್ತಿರುವ ಸೋಲಿನಿಂದ ಹತಾಶರಾಗಿರುವ ಬಿಜೆಪಿ ಗೂಂಡಾಗಳು ಕಟ್ಟಿಗೆ ಹಿಡಿದುಕೊಂಡು ಅಮೇಥಿಯ ಕಾಂಗ್ರೆಸ್ ಕಚೇರಿಯ ಹೊರಗೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿಯ ಜನರ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿದೆ. ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸ್ಥಳೀಯರ ವಾಹನಗಳಿಗೂ ಹಾನಿಯಾಗಿದೆ. ಈ ಇಡೀ ಘಟನೆಯಲ್ಲಿ ಪೊಲೀಸ್ ಆಡಳಿತ ಮೂಕ ಪ್ರೇಕ್ಷಕರಂತೆ ನಿಂತಿತ್ತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುವುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಘಟನೆಯ ಮಾಹಿತಿ ಪಡೆದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಪಕ್ಷದ ಕಚೇರಿಗೆ ಧಾವಿಸಿದ್ದಾರೆ. ಘಟನೆ ಖಂಡಿಸಿ ರಾತ್ರಿಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಮಯಾಂಕ್ ದ್ವಿವೇದಿ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ಅಮೇಥಿ ಎಸ್ಪಿ ಎಳಮಾರನ್ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜಿಲ್ಲಾ ಯುವ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ದ ಇಬ್ಬರು ಜಿಲ್ಲಾ ಮಟ್ಟದ ಮುಖಂಡರು ಮತ್ತು ಇತರ ಎಂಟು ಮಂದಿ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಕಿಸಾನ್ ಮೋರ್ಚಾದ ಜಿಲ್ಲಾಧ್ಯಕ್ಷ ಸತ್ಯೇಂದ್ರ ಪ್ರತಾಪ್ ಸಿಂಗ್, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಮುಖ್ಯಸ್ಥ ವಿಶು ಮಿಶ್ರಾ ಮತ್ತು ಇತರ ಎಂಟು ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಿಂಗ್ ತಮ್ಮ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.

ಸತ್ಯೇಂದ್ರ ಪ್ರತಾಪ್ ಸಿಂಗ್, ವಿಶು ಮಿಶ್ರಾ ಮತ್ತು ಎಂಟು ಅಪರಿಚಿತರ ವಿರುದ್ಧ ಸೆಕ್ಷನ್ 147, 323, 504 ಮತ್ತು 506 ರ ಅಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಗಳು ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಬಿಜೆಪಿ ಜಿಲ್ಲಾ ಘಟಕದ ಮುಖ್ಯಸ್ಥ ದುರ್ಗೇಶ್ ತ್ರಿಪಾಠಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಮತ್ತು ನಿರಾಶೆಗೊಂಡಿದ್ದಾರೆ. ಕ್ಷುಲ್ಲಕ ರಾಜಕೀಯ ಹೊರತುಪಡಿಸಿ ಅವರಿಗೆ ಏನೂ ಉಳಿದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...