Homeಮುಖಪುಟಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ, ಕಾಂಗ್ರೆಸ್‌ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣಾ ಹೊಸ್ತಿಲ್ಲಲ್ಲೇ ಪ್ರತಿಪಕ್ಷಗಳ ನಾಯಕರ ಬಂಧನ, ಬ್ಯಾಂಕ್‌ ಖಾತೆಗಳಿಗೆ ನಿರ್ಬಂಧ ಹೇರಿರುವುದು ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಮಾಡಿದ ವ್ಯವಸ್ಥಿತ ಪಿತೂರಿಯ ಭಾಗ ಎಂದು ಆರೋಪ ಕೇಳಿ ಬಂದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಚುನಾವಣೆ ಅತಿ ದೊಡ್ಡ ಉತ್ಸವ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಇದರಲ್ಲಿ ಭಾಗಿಯಾಗುವುದಕ್ಕೆ ಒಂದು ಪಕ್ಷಕ್ಕೆ ಮಾತ್ರ ಅವಕಾಶ? ಒಂದು ರಾಷ್ಟ್ರೀಯ ಪಕ್ಷಕ್ಕೆ ಮಾತ್ರ ಎಲ್ಲಾ ಸಂಪತ್ತು ಮತ್ತು ಎಲ್ಲಾ ಅಧಿಕಾರ?  ಪ್ರಧಾನ ಪ್ರತಿಪಕ್ಷಕ್ಕೆ ಪಾರ್ಟಿಗೆ ನಿಯಮನುಸಾರ ಪಾರ್ಟಿ ಕಾರ್ಯಕರ್ತರಿಂದ ಸಂಗ್ರಹಿಸಿದ ಹಣವನ್ನು ಕೂಡ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಏನು ಕಾರಣ, ಆದಾಯ ತೆರಿಗೆ ಇಲಾಖೆ ಪ್ರಕಾರ, 10,000ರೂ ಪಾವತಿಸದ ಕಾರಣಕ್ಕೆ ಅವರು ನಮ್ಮ ಖಾತೆಯ 280 ಕೋಟಿಗೆ ನಿರ್ಬಂಧಿಸಿದ್ದಾರೆ. 96ರ ಸೀತಾ ರಾಮ್‌ ಕೇಸ್‌ ವಿಚಾರ ಹೇಳಿಕೊಂಡು ಈಗ ನೊಟೀಸ್‌ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ ಪಕ್ಷವನ್ನು ಚುನಾವಣಾ ಸಮರದಿಂದ ಹಿಂದೆ ಸರಿಯುವಂತೆ ಮಾಡುವ ಪಿತೂರಿಯಾಗಿದೆ. ಇದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿ ನೇರವಾಗಿ ಪಾಲ್ಗೊಂಡು ರೂಪಿಸಿದ ತಂತ್ರವಾಗಿದೆ. ಇದನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದೆವು, ಆದರೆ ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆಗೆ ತಡ ಮಾಡುತ್ತಿದೆ. ಒಂದು ತಿಂಗಳ ಬಳಿಕ ಪ್ರಕರಣ ಕೈಗೆತ್ತಿಕೊಂಡರೆ ನಮಗೇನು ಪ್ರಯೋಜನ? ಚುನಾವಣೆ ಈ ವೇಳೆ ಮುಗಿಯುವುದಿಲ್ಲವೇ? ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಕ್ರಿಯವಾಗಿ ಸ್ಪರ್ಧಿಸಲು ಅವಕಾಶ ನೀಡುವುತ್ತಿಲ್ಲ ಎಂದರೆ ಮತ್ತೆ ಯಾವ ರೀತಿಯ ಪ್ರಜಾಪ್ರಭುತ್ವ ದೇಶದಲ್ಲಿ ಬಾಕಿಯಾಗಿದೆ ಎಂದು ಕೆ.ಸಿ ವೇಣುಗೋಪಾಲ್‌ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು ಎಂದು ಈ ಮೊದಲು ಕಾಂಗ್ರೆಸ್‌ ಹೇಳಿತ್ತು. ಸೋನಿಯಾ ಗಾಂಧಿ ಈ ಕುರಿತು ಸುದ್ದಿಗೋಷ್ಟಿಯನ್ನು ನಡೆಸಿ, ಕಾಂಗ್ರೆಸ್‌ ಪಕ್ಷವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಈ ಕ್ರಮವು ಕಾಂಗ್ರೆಸ್‌ ಪಕ್ಷದ ಮೇಲಷ್ಟೆ ಅಲ್ಲ, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಚುನಾವಣೆಯಲ್ಲಿ ಹೋರಾಟ ನಡೆಸುವ ನಮ್ಮ ಸಾಮರ್ಥ್ಯವನ್ನೇ ನಾಶ ಮಾಡಲಾಗಿದೆ. ನಾವು ಚುನಾವಣಾ ಪ್ರಚಾರ ಕಾರ್ಯ ಮಾಡುವ ಶಕ್ತಿ ಕಳೆದುಕೊಂಡಿದ್ದೇವೆ ಎಂದು ಹೇಳಿದ್ದರು. ಅಜಯ್‌ ಮಾಕನ್‌ ಅವರು ಮಾತನಾಡಿ, ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿ, ಅದರಿಂದ 115.32 ಕೋಟಿಯಷ್ಟು ಮೊತ್ತವನ್ನು ಒತ್ತಾಯದಿಂದ ಪಡೆದುಕೊಂಡಿರುವ ಬಿಜೆಪಿ, ಆ ಮೂಲಕ ಸಾಮಾನ್ಯ ಜನರು ಕಾಂಗ್ರೆಸ್‌ಗೆ ನೀಡಿದ್ದ ದೇಣಿಗೆಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯ ಈ ಕುರಿತು ಮಾತನಾಡಿ, ಲೋಕಸಭಾ ಚುನಾವಣೆಯ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕು ಎನ್ನುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹಿಸಿರುವ ಹಣ ಹೊರತು ದೊಡ್ಡ ಉದ್ಯಮಪತಿಗಳದ್ದಲ್ಲ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಸರ್ಕಾರ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ತನ್ನ ಪಕ್ಷದ ಮೇಲೆ ಸರ್ಜಿಕಲ್ ಸ್ಟ್ರೈಕ್’ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಹಿಂದೆ ಆರೋಪಿಸಿದ್ದರು.

ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಇದರ ಪರಿಣಾಮವಾಗಿ ನಾವು ಯಾವುದೇ ಜಾಹೀರಾತು ಕೊಡುವಂತಿಲ್ಲ. ಅಭ್ಯರ್ಥಿಗಳಿಗೆ ಚುನಾವಣಾ ಖರ್ಚಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಬಲವಂತವಾಗಿ ಕಾಂಗ್ರೆಸ್ ಹಣ ಫ್ರೀಜ್ ಮಾಡಲಾಗಿದೆ. ಹೀಗಾದರೆ ನಾವು ಚುನಾವಣೆಯನ್ನು ಎದುರಿಸುವುದು ಹೇಗೆ? ಮೋದಿ ಸರ್ಕಾರ ಫಾಸಿಸಂ ಮಾಡುತ್ತಿದೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು  ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಕೇಜ್ರಿವಾಲ್‌ ಅವರು ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಮಾಡಿದ ವ್ಯವಸ್ಥಿತ ಪಿತೂರಿ ಎಂದು ಈ ಹಿಂದೆ ಸಮನ್ಸ್‌ ವೇಳೆ ಎಎಪಿ ಆರೋಪಿಸಿತ್ತು. ಇದೀಗ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಶನಿವಾರ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷದ ಕಚೇರಿ ಪ್ರವೇಶವನ್ನು ಸೀಲ್‌ ಮಾಡುವುದು ಹೇಗೆ ಸಾಧ್ಯ? ಇದು ಭಾರತೀಯ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ದೂರು ನೀಡಲು ನಾವು ಚುನಾವಣಾ ಆಯೋಗಕ್ಕೆ ಸಮಯವನ್ನು ಕೇಳಿದ್ದೇವೆ ಎಂದು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಜೆಪಿ ತನ್ನ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳ ಈ ಹಿಂದೆ ಹಲವು ಬಾರಿ ಆರೋಪವನ್ನು ಮಾಡಿದ್ದವು, ಇದೀಗ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಸರಕಾರಿ ತನಿಖಾ ಸಂಸ್ಥೆಗಳನ್ನು ಆಯುಧವಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಮತ್ತೆ ಕೇಳಿ ಬಂದಿದೆ.

ಇದನ್ನು ಓದಿ: ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...