Homeಮುಖಪುಟಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ, ಕಾಂಗ್ರೆಸ್‌ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣಾ ಹೊಸ್ತಿಲ್ಲಲ್ಲೇ ಪ್ರತಿಪಕ್ಷಗಳ ನಾಯಕರ ಬಂಧನ, ಬ್ಯಾಂಕ್‌ ಖಾತೆಗಳಿಗೆ ನಿರ್ಬಂಧ ಹೇರಿರುವುದು ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಮಾಡಿದ ವ್ಯವಸ್ಥಿತ ಪಿತೂರಿಯ ಭಾಗ ಎಂದು ಆರೋಪ ಕೇಳಿ ಬಂದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಚುನಾವಣೆ ಅತಿ ದೊಡ್ಡ ಉತ್ಸವ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಇದರಲ್ಲಿ ಭಾಗಿಯಾಗುವುದಕ್ಕೆ ಒಂದು ಪಕ್ಷಕ್ಕೆ ಮಾತ್ರ ಅವಕಾಶ? ಒಂದು ರಾಷ್ಟ್ರೀಯ ಪಕ್ಷಕ್ಕೆ ಮಾತ್ರ ಎಲ್ಲಾ ಸಂಪತ್ತು ಮತ್ತು ಎಲ್ಲಾ ಅಧಿಕಾರ?  ಪ್ರಧಾನ ಪ್ರತಿಪಕ್ಷಕ್ಕೆ ಪಾರ್ಟಿಗೆ ನಿಯಮನುಸಾರ ಪಾರ್ಟಿ ಕಾರ್ಯಕರ್ತರಿಂದ ಸಂಗ್ರಹಿಸಿದ ಹಣವನ್ನು ಕೂಡ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಏನು ಕಾರಣ, ಆದಾಯ ತೆರಿಗೆ ಇಲಾಖೆ ಪ್ರಕಾರ, 10,000ರೂ ಪಾವತಿಸದ ಕಾರಣಕ್ಕೆ ಅವರು ನಮ್ಮ ಖಾತೆಯ 280 ಕೋಟಿಗೆ ನಿರ್ಬಂಧಿಸಿದ್ದಾರೆ. 96ರ ಸೀತಾ ರಾಮ್‌ ಕೇಸ್‌ ವಿಚಾರ ಹೇಳಿಕೊಂಡು ಈಗ ನೊಟೀಸ್‌ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ ಪಕ್ಷವನ್ನು ಚುನಾವಣಾ ಸಮರದಿಂದ ಹಿಂದೆ ಸರಿಯುವಂತೆ ಮಾಡುವ ಪಿತೂರಿಯಾಗಿದೆ. ಇದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿ ನೇರವಾಗಿ ಪಾಲ್ಗೊಂಡು ರೂಪಿಸಿದ ತಂತ್ರವಾಗಿದೆ. ಇದನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದೆವು, ಆದರೆ ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆಗೆ ತಡ ಮಾಡುತ್ತಿದೆ. ಒಂದು ತಿಂಗಳ ಬಳಿಕ ಪ್ರಕರಣ ಕೈಗೆತ್ತಿಕೊಂಡರೆ ನಮಗೇನು ಪ್ರಯೋಜನ? ಚುನಾವಣೆ ಈ ವೇಳೆ ಮುಗಿಯುವುದಿಲ್ಲವೇ? ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಕ್ರಿಯವಾಗಿ ಸ್ಪರ್ಧಿಸಲು ಅವಕಾಶ ನೀಡುವುತ್ತಿಲ್ಲ ಎಂದರೆ ಮತ್ತೆ ಯಾವ ರೀತಿಯ ಪ್ರಜಾಪ್ರಭುತ್ವ ದೇಶದಲ್ಲಿ ಬಾಕಿಯಾಗಿದೆ ಎಂದು ಕೆ.ಸಿ ವೇಣುಗೋಪಾಲ್‌ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು ಎಂದು ಈ ಮೊದಲು ಕಾಂಗ್ರೆಸ್‌ ಹೇಳಿತ್ತು. ಸೋನಿಯಾ ಗಾಂಧಿ ಈ ಕುರಿತು ಸುದ್ದಿಗೋಷ್ಟಿಯನ್ನು ನಡೆಸಿ, ಕಾಂಗ್ರೆಸ್‌ ಪಕ್ಷವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಈ ಕ್ರಮವು ಕಾಂಗ್ರೆಸ್‌ ಪಕ್ಷದ ಮೇಲಷ್ಟೆ ಅಲ್ಲ, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಚುನಾವಣೆಯಲ್ಲಿ ಹೋರಾಟ ನಡೆಸುವ ನಮ್ಮ ಸಾಮರ್ಥ್ಯವನ್ನೇ ನಾಶ ಮಾಡಲಾಗಿದೆ. ನಾವು ಚುನಾವಣಾ ಪ್ರಚಾರ ಕಾರ್ಯ ಮಾಡುವ ಶಕ್ತಿ ಕಳೆದುಕೊಂಡಿದ್ದೇವೆ ಎಂದು ಹೇಳಿದ್ದರು. ಅಜಯ್‌ ಮಾಕನ್‌ ಅವರು ಮಾತನಾಡಿ, ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿ, ಅದರಿಂದ 115.32 ಕೋಟಿಯಷ್ಟು ಮೊತ್ತವನ್ನು ಒತ್ತಾಯದಿಂದ ಪಡೆದುಕೊಂಡಿರುವ ಬಿಜೆಪಿ, ಆ ಮೂಲಕ ಸಾಮಾನ್ಯ ಜನರು ಕಾಂಗ್ರೆಸ್‌ಗೆ ನೀಡಿದ್ದ ದೇಣಿಗೆಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯ ಈ ಕುರಿತು ಮಾತನಾಡಿ, ಲೋಕಸಭಾ ಚುನಾವಣೆಯ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕು ಎನ್ನುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹಿಸಿರುವ ಹಣ ಹೊರತು ದೊಡ್ಡ ಉದ್ಯಮಪತಿಗಳದ್ದಲ್ಲ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಸರ್ಕಾರ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ತನ್ನ ಪಕ್ಷದ ಮೇಲೆ ಸರ್ಜಿಕಲ್ ಸ್ಟ್ರೈಕ್’ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಹಿಂದೆ ಆರೋಪಿಸಿದ್ದರು.

ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಇದರ ಪರಿಣಾಮವಾಗಿ ನಾವು ಯಾವುದೇ ಜಾಹೀರಾತು ಕೊಡುವಂತಿಲ್ಲ. ಅಭ್ಯರ್ಥಿಗಳಿಗೆ ಚುನಾವಣಾ ಖರ್ಚಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಬಲವಂತವಾಗಿ ಕಾಂಗ್ರೆಸ್ ಹಣ ಫ್ರೀಜ್ ಮಾಡಲಾಗಿದೆ. ಹೀಗಾದರೆ ನಾವು ಚುನಾವಣೆಯನ್ನು ಎದುರಿಸುವುದು ಹೇಗೆ? ಮೋದಿ ಸರ್ಕಾರ ಫಾಸಿಸಂ ಮಾಡುತ್ತಿದೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು  ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಕೇಜ್ರಿವಾಲ್‌ ಅವರು ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಮಾಡಿದ ವ್ಯವಸ್ಥಿತ ಪಿತೂರಿ ಎಂದು ಈ ಹಿಂದೆ ಸಮನ್ಸ್‌ ವೇಳೆ ಎಎಪಿ ಆರೋಪಿಸಿತ್ತು. ಇದೀಗ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಶನಿವಾರ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷದ ಕಚೇರಿ ಪ್ರವೇಶವನ್ನು ಸೀಲ್‌ ಮಾಡುವುದು ಹೇಗೆ ಸಾಧ್ಯ? ಇದು ಭಾರತೀಯ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ದೂರು ನೀಡಲು ನಾವು ಚುನಾವಣಾ ಆಯೋಗಕ್ಕೆ ಸಮಯವನ್ನು ಕೇಳಿದ್ದೇವೆ ಎಂದು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಜೆಪಿ ತನ್ನ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳ ಈ ಹಿಂದೆ ಹಲವು ಬಾರಿ ಆರೋಪವನ್ನು ಮಾಡಿದ್ದವು, ಇದೀಗ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಸರಕಾರಿ ತನಿಖಾ ಸಂಸ್ಥೆಗಳನ್ನು ಆಯುಧವಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಮತ್ತೆ ಕೇಳಿ ಬಂದಿದೆ.

ಇದನ್ನು ಓದಿ: ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...