Homeಮುಖಪುಟಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ, ಕಾಂಗ್ರೆಸ್‌ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣಾ ಹೊಸ್ತಿಲ್ಲಲ್ಲೇ ಪ್ರತಿಪಕ್ಷಗಳ ನಾಯಕರ ಬಂಧನ, ಬ್ಯಾಂಕ್‌ ಖಾತೆಗಳಿಗೆ ನಿರ್ಬಂಧ ಹೇರಿರುವುದು ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಮಾಡಿದ ವ್ಯವಸ್ಥಿತ ಪಿತೂರಿಯ ಭಾಗ ಎಂದು ಆರೋಪ ಕೇಳಿ ಬಂದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಚುನಾವಣೆ ಅತಿ ದೊಡ್ಡ ಉತ್ಸವ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಇದರಲ್ಲಿ ಭಾಗಿಯಾಗುವುದಕ್ಕೆ ಒಂದು ಪಕ್ಷಕ್ಕೆ ಮಾತ್ರ ಅವಕಾಶ? ಒಂದು ರಾಷ್ಟ್ರೀಯ ಪಕ್ಷಕ್ಕೆ ಮಾತ್ರ ಎಲ್ಲಾ ಸಂಪತ್ತು ಮತ್ತು ಎಲ್ಲಾ ಅಧಿಕಾರ?  ಪ್ರಧಾನ ಪ್ರತಿಪಕ್ಷಕ್ಕೆ ಪಾರ್ಟಿಗೆ ನಿಯಮನುಸಾರ ಪಾರ್ಟಿ ಕಾರ್ಯಕರ್ತರಿಂದ ಸಂಗ್ರಹಿಸಿದ ಹಣವನ್ನು ಕೂಡ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಏನು ಕಾರಣ, ಆದಾಯ ತೆರಿಗೆ ಇಲಾಖೆ ಪ್ರಕಾರ, 10,000ರೂ ಪಾವತಿಸದ ಕಾರಣಕ್ಕೆ ಅವರು ನಮ್ಮ ಖಾತೆಯ 280 ಕೋಟಿಗೆ ನಿರ್ಬಂಧಿಸಿದ್ದಾರೆ. 96ರ ಸೀತಾ ರಾಮ್‌ ಕೇಸ್‌ ವಿಚಾರ ಹೇಳಿಕೊಂಡು ಈಗ ನೊಟೀಸ್‌ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ ಪಕ್ಷವನ್ನು ಚುನಾವಣಾ ಸಮರದಿಂದ ಹಿಂದೆ ಸರಿಯುವಂತೆ ಮಾಡುವ ಪಿತೂರಿಯಾಗಿದೆ. ಇದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿ ನೇರವಾಗಿ ಪಾಲ್ಗೊಂಡು ರೂಪಿಸಿದ ತಂತ್ರವಾಗಿದೆ. ಇದನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದೆವು, ಆದರೆ ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆಗೆ ತಡ ಮಾಡುತ್ತಿದೆ. ಒಂದು ತಿಂಗಳ ಬಳಿಕ ಪ್ರಕರಣ ಕೈಗೆತ್ತಿಕೊಂಡರೆ ನಮಗೇನು ಪ್ರಯೋಜನ? ಚುನಾವಣೆ ಈ ವೇಳೆ ಮುಗಿಯುವುದಿಲ್ಲವೇ? ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಕ್ರಿಯವಾಗಿ ಸ್ಪರ್ಧಿಸಲು ಅವಕಾಶ ನೀಡುವುತ್ತಿಲ್ಲ ಎಂದರೆ ಮತ್ತೆ ಯಾವ ರೀತಿಯ ಪ್ರಜಾಪ್ರಭುತ್ವ ದೇಶದಲ್ಲಿ ಬಾಕಿಯಾಗಿದೆ ಎಂದು ಕೆ.ಸಿ ವೇಣುಗೋಪಾಲ್‌ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು ಎಂದು ಈ ಮೊದಲು ಕಾಂಗ್ರೆಸ್‌ ಹೇಳಿತ್ತು. ಸೋನಿಯಾ ಗಾಂಧಿ ಈ ಕುರಿತು ಸುದ್ದಿಗೋಷ್ಟಿಯನ್ನು ನಡೆಸಿ, ಕಾಂಗ್ರೆಸ್‌ ಪಕ್ಷವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಈ ಕ್ರಮವು ಕಾಂಗ್ರೆಸ್‌ ಪಕ್ಷದ ಮೇಲಷ್ಟೆ ಅಲ್ಲ, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಚುನಾವಣೆಯಲ್ಲಿ ಹೋರಾಟ ನಡೆಸುವ ನಮ್ಮ ಸಾಮರ್ಥ್ಯವನ್ನೇ ನಾಶ ಮಾಡಲಾಗಿದೆ. ನಾವು ಚುನಾವಣಾ ಪ್ರಚಾರ ಕಾರ್ಯ ಮಾಡುವ ಶಕ್ತಿ ಕಳೆದುಕೊಂಡಿದ್ದೇವೆ ಎಂದು ಹೇಳಿದ್ದರು. ಅಜಯ್‌ ಮಾಕನ್‌ ಅವರು ಮಾತನಾಡಿ, ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿ, ಅದರಿಂದ 115.32 ಕೋಟಿಯಷ್ಟು ಮೊತ್ತವನ್ನು ಒತ್ತಾಯದಿಂದ ಪಡೆದುಕೊಂಡಿರುವ ಬಿಜೆಪಿ, ಆ ಮೂಲಕ ಸಾಮಾನ್ಯ ಜನರು ಕಾಂಗ್ರೆಸ್‌ಗೆ ನೀಡಿದ್ದ ದೇಣಿಗೆಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯ ಈ ಕುರಿತು ಮಾತನಾಡಿ, ಲೋಕಸಭಾ ಚುನಾವಣೆಯ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕು ಎನ್ನುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹಿಸಿರುವ ಹಣ ಹೊರತು ದೊಡ್ಡ ಉದ್ಯಮಪತಿಗಳದ್ದಲ್ಲ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಸರ್ಕಾರ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ತನ್ನ ಪಕ್ಷದ ಮೇಲೆ ಸರ್ಜಿಕಲ್ ಸ್ಟ್ರೈಕ್’ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಹಿಂದೆ ಆರೋಪಿಸಿದ್ದರು.

ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಇದರ ಪರಿಣಾಮವಾಗಿ ನಾವು ಯಾವುದೇ ಜಾಹೀರಾತು ಕೊಡುವಂತಿಲ್ಲ. ಅಭ್ಯರ್ಥಿಗಳಿಗೆ ಚುನಾವಣಾ ಖರ್ಚಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಬಲವಂತವಾಗಿ ಕಾಂಗ್ರೆಸ್ ಹಣ ಫ್ರೀಜ್ ಮಾಡಲಾಗಿದೆ. ಹೀಗಾದರೆ ನಾವು ಚುನಾವಣೆಯನ್ನು ಎದುರಿಸುವುದು ಹೇಗೆ? ಮೋದಿ ಸರ್ಕಾರ ಫಾಸಿಸಂ ಮಾಡುತ್ತಿದೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು  ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಕೇಜ್ರಿವಾಲ್‌ ಅವರು ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಮಾಡಿದ ವ್ಯವಸ್ಥಿತ ಪಿತೂರಿ ಎಂದು ಈ ಹಿಂದೆ ಸಮನ್ಸ್‌ ವೇಳೆ ಎಎಪಿ ಆರೋಪಿಸಿತ್ತು. ಇದೀಗ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಶನಿವಾರ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷದ ಕಚೇರಿ ಪ್ರವೇಶವನ್ನು ಸೀಲ್‌ ಮಾಡುವುದು ಹೇಗೆ ಸಾಧ್ಯ? ಇದು ಭಾರತೀಯ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ದೂರು ನೀಡಲು ನಾವು ಚುನಾವಣಾ ಆಯೋಗಕ್ಕೆ ಸಮಯವನ್ನು ಕೇಳಿದ್ದೇವೆ ಎಂದು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಜೆಪಿ ತನ್ನ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳ ಈ ಹಿಂದೆ ಹಲವು ಬಾರಿ ಆರೋಪವನ್ನು ಮಾಡಿದ್ದವು, ಇದೀಗ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಸರಕಾರಿ ತನಿಖಾ ಸಂಸ್ಥೆಗಳನ್ನು ಆಯುಧವಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಮತ್ತೆ ಕೇಳಿ ಬಂದಿದೆ.

ಇದನ್ನು ಓದಿ: ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...